ಚೌಕಾಬಾರ ಆಡುತ್ತಿದ್ದಾಗ ಇಬ್ಬರ ನಡುವೆ ಜಗಳ – ಮಧ್ಯದಲ್ಲಿ ಬಂದ ಗೆಳೆಯನಿಗೆ ಚಾಕುವಿನಿಂದ ಇರಿದು ಕೊಲೆ!

ಹಾಸನ : ಜಗಳ ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ದೋಣನಕಟ್ಟೆ ಗ್ರಾಮದಲ್ಲಿ ನಡೆದಿದೆ. ಲಕ್ಕಪ್ಪ(48) ಕೊಲೆಯಾದ ವ್ಯಕ್ತಿ. ಬಸವರಾಜ ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ.

ಶಶಿ ಮತ್ತು ವಸಂತ ಚೌಕಾಬಾರ ಆಡುತ್ತಿದ್ದಾಗ ಬಸವರಾಜ ಬಂದು ಜಗಳ ಮಾಡಿ, ಅವರಿಬ್ಬರ ಮೇಲೆ ಹಲ್ಲೆ ಮಾಡಿದ್ದ. ಈ ವೇಳೆ ಲಕ್ಕಪ್ಪ ಜಗಳ ಬಿಡಿಸಲು ಹೋದಾಗ ಬಸವರಾಜ ಚಾಕುವಿನಿಂದ ಎದೆ ಭಾಗಕ್ಕೆ ಇರಿದು ಲಕ್ಕಪ್ಪನನ್ನು ಕೊಲೆ ಮಾಡಿದ್ದಾನೆ. ಬಸವರಾಜನ ಜೊತೆಗಿದ್ದ ನಂಜುಂಡಿಯು ಹಲ್ಲೆಗೆ ಬೆಂಬಲ ನೀಡಿದ್ದ ಎಂದ ಆರೋಪ ಕೇಳಿಬಂದಿದೆ. ಇದೀಗ ಆರೋಪಿ ಬಸವರಾಜ ಹಾಗೂ ನಂಜುಂಡಿ ತಲೆಮರೆಸಿಕೊಂಡಿದ್ದಾರೆ. 

ಶಶಿ, ವಸಂತ ಎಂಬುವವರಿಗೆ ಬೆನ್ನು ಹಾಗೂ ಕೈ ಭಾಗಕ್ಕೆ ಬಸವರಾಜ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದ. ಗಾಯಾಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಮುದ್ದು ಮಗಳ ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಅದಿತಿ ಪ್ರಭುದೇವ – ಸ್ಯಾಂಡಲ್‌ವುಡ್‌ ತಾರೆಯರು ಭಾಗಿ!

 

Btv Kannada
Author: Btv Kannada

Read More

Read More