ದಾವಣಗೆರೆ : ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಈ ಅಪಘಾತ ಜಿಲ್ಲೆಯ ಅತ್ತಿಗೆರೆ ಗ್ರಾಮದ ಬಳಿಯ ಬೀರೂರು ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು 38 ವರ್ಷದ ಬಸವರಾಜಪ್ಪ, 32 ವರ್ಷದ ಶ್ರೀಧರ್ ಹಾಗೂ 35 ವರ್ಷದ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ದಾವಣಗೆರೆ ಕಡೆಯಿಂದ ಸಂತೇಬೆನ್ನೂರು ಕಡೆ ಹೋಗುತ್ತಿದ್ದ ಕಾರು ಹಾಗೂ ದಾವಣಗೆರೆ ಕಡೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಗಾಯಗೊಂಡ ಇಬ್ಬರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಒಳಗಾದವರು ಬೆಳಗಾವಿ ಮೂಲದ ಕಾಗವಾಡ ತಾಲೂಕಿನ ಶಿರಗುಪ್ಪ ಗ್ರಾಮದವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಚೌಕಾಬಾರ ಆಡುತ್ತಿದ್ದಾಗ ಇಬ್ಬರ ನಡುವೆ ಜಗಳ – ಮಧ್ಯದಲ್ಲಿ ಬಂದ ಗೆಳೆಯನಿಗೆ ಚಾಕುವಿನಿಂದ ಇರಿದು ಕೊಲೆ!

Author: Btv Kannada
Post Views: 599