ಗಜೇಂದ್ರಗಡ : ಕಾಮಗಾರಿ ಬಿಲ್ ಪಾವತಿಸಲು ಗುತ್ತಿಗೆದಾರರಿಂದ 3 ಲಕ್ಷ ರೂ. ಲಂಚ ಪಡೆಯುತ್ತಿದ್ದ ಆರೋಪದಡಿ ಲೋಕೋಪಯೋಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಹೇಶ ರಾಠೋಡನನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಯಾದಗಿರಿ ಜಿಲ್ಲೆಯ ದ್ವಿತೀಯ ದರ್ಜೆ ಗುತ್ತಿಗೆದಾರ ಶರಣಪ್ಪ ಸಾಬಣ್ಣ ಅವರು ರೋಣ ತಾಲ್ಲೂಕಿನ 34 ಲಕ್ಷ ಮೌಲ್ಯದ ಕಾಮಗಾರಿಯನ್ನು ಆನ್ಲೈನ್ ಮೂಲಕ ಗುತ್ತಿಗೆ ಪಡೆದು 6 ತಿಂಗಳ ಹಿಂದೆಯೆ ಪೂರ್ಣಗೊಳಿಸಿದ್ದಾರೆ. ಕಾಮಗಾರಿ ಬಿಲ್ ಪಾವತಿಗೆ ಲೋಕೋಪಯೋಗಿ ಇಲಾಖೆಯ AEE ಮಹೇಶ ರಾಠೋಡ 4.60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಕಾರ್ಯಾಚರಣೆ ಧಾರವಾಡದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಗದಗ ಉಪಾಧೀಕ್ಷಕ ವಿಜಯ ಬಿರಾದಾರ ಅವರ ನೇತೃತ್ವದಲ್ಲಿ ನಡೆಯಿತು. ಇದೀಗ ಮುಂಗಡವಾಗಿ 3 ಲಕ್ಷ ರೂ. ಹಣ ಪಡೆಯುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು AEE ಮಹೇಶ ರಾಠೋಡನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಅ.12 ರಿಂದ ಬಾಗಲಗುಂಟೆ ಮಾರಮ್ಮ ದೇವಿಯ ಅದ್ಧೂರಿ ಜಾತ್ರಾ ಮಹೋತ್ಸವ!







