ವಿನಯ್​ ಸೋಮಯ್ಯ ಅವರದ್ದು ಆತ್ಮಹತ್ಯೆ ಅಲ್ಲ.. ಕೊಲೆ – ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗಂಭೀರ ಆರೋಪ!

ಬೆಂಗಳೂರು : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರದ್ದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಇಬ್ಬರು ಕೈ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗದ ವಿಚಾರಕ್ಕೆ ಕಿಡಿಕಾರಿದ್ದಾರೆ. ಅಧಿಕಾರದ ದರ್ಪದಿಂದ ಕಾಂಗ್ತೆಸ್‌ನವ್ರು ಹೇಳಿಕೆ ಕೊಡ್ತಿದ್ದಾರೆ. ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ ಅದೊಂದು ಕೊಲೆ. ಇದರ ಹಿಂದೆ ಯಾರೆಲ್ಲ ದುಷ್ಟ ಶಕ್ತಿಗಳು ಇದ್ದಾರೆ ಅಂತ ಎಲ್ಲರಿಗೂ ಗೊತ್ತಿದೆ. ಅವರಿಗೆ ಶಿಕ್ಷೆ ಆಗಲೇಬೇಕು. ವಿನಯ್ ಸೋಮಯ್ಯ ಕೇಸ್ ಸಿಬಿಐ ತನಿಖೆಗೆ ಕೊಡಬೇಕು. ನಾವು ಕಾನೂನು ಹೋರಾಟ ಮಾಡ್ತೇವೆ. ಇವತ್ತು ಕಾನೂನು ತಜ್ಞರ ಜೊತೆ ಮುಂದಿನ ಹೋರಾಟ ಬಗ್ಗೆ ಚರ್ಚೆ ಮಾಡ್ತೇನೆ ಎಂದು ಹೇಳಿದ್ದಾರೆ.

ಇನ್ನು, ನಾಳೆಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಜನಾಕ್ರೋಶ ಹೋರಾಟ ಮಾಡುತ್ತೇವೆ. ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿ ಹೋರಾಟ ಆರಂಭ ಆಗುತ್ತದೆ. ಕೇಂದ್ರ ಸಚಿವ ಜೋಷಿಯವರು ಹೋರಾಟಕ್ಕೆ ಚಾಲನೆ ಕೊಡ್ತಾರೆ. ಎಲ್ಲಾ ಜಿಲ್ಲೆಯಲ್ಲೂ ಜನವಿರೋಧಿ ಕಾಂಗ್ರೆಸ್ ವಿರುದ್ದ ಹೋರಾಟ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ : MLAಗಳಾದ ಮಂಥರ್‌ ಗೌಡ, ಪೊನ್ನಣ್ಣಗೆ ಸಂಕಷ್ಟ – ಪತ್ನಿಗೆ ವಿನಯ್ ಸೋಮಯ್ಯ ಬರೆದ ಸ್ಪೋಟಕ ಪತ್ರ ಬಯಲಿಗೆ!

Btv Kannada
Author: Btv Kannada

Read More