ಬೆಂಗಳೂರು : ಉಪಮುಖ್ಯಮಂತ್ರಿ, KPCC ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಕೊಡಗು ಜಿಲ್ಲೆಯಲ್ಲಿ ಕೈಗೊಳ್ಳಬೇಕಿದ್ದ ಪ್ರವಾಸ ಕಾರ್ಯಕ್ರಮ ಹವಾಮಾನ ವೈಪರೀತ್ಯದಿಂದ ರದ್ದಾಗಿದೆ.

ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಜಿಲ್ಲೆಯಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಹವಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇದೀಗ ಹವಾಮಾನ ವೈಪರೀತ್ಯದಿಂದ ತಲಕಾವೇರಿಯ ಪವಿತ್ರ ಕಾವೇರಿ ತೀರ್ಥೋದ್ಭವದಲ್ಲಿ ಭಾಗಿಯಾಗಬೇಕಿದ್ದ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ಬೆಂಗಳೂರು : ತಾರಕಕ್ಕೇರಿದ ಕುಸುಮ v/s ಮುನಿರತ್ನ ಫೈಟ್ – RR ನಗರದಲ್ಲಿರುವ ಶಾಸಕ ಮುನಿರತ್ನ ಕಚೇರಿಗೆ ಬೀಗ!
Author: Btv Kannada
Post Views: 278







