ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪುತ್ರ MLC ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಅವಧಿಯಲ್ಲೇ ಸಿಎಂ ಆಗಬೇಕು ಎಂಬ ಕನಸು ಇಟ್ಟುಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಉಲ್ಲೇಖಿಸಿ ಬ್ಯಾಟಿಂಗ್ ನಡೆಸಿದ್ದಾರೆ.

ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಸತೀಶ್ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ ಎಂದರು.

ನಮ್ಮ ತಂದೆ ಸಿದ್ದರಾಮಯ್ಯಯವರು ರಾಜಕೀಯ ಕೂನೆಗಾಲದಲ್ಲಿದ್ದಾರೆ. ಅವರ ರಾಜಕೀಯ ಕೂನೆ ಘಟ್ಟದಲ್ಲಿರುವ ಸಮಯದಲ್ಲಿ ಈ ರೀತಿ ವೈಚಾರಿಕವಾಗಿ ಪ್ರಗತಿಪರವಾಗಿ ಸಿದ್ದಾಂತ ಇಟ್ಟುಕೊಂಡಿರುವವರಿಗೆ ಮಾರ್ಗದರ್ಶಶನ, ನೇತೃತ್ವ ವಹಿಸಿಕೊಳ್ಳಲು ಒಬ್ಬ ನಾಯಕ ಬೇಕು. ಸತೀಶ್ ಜಾರಕಿಹೊಳಿಯವರು ಅಂತಹ ಜವಾಬ್ದಾರಿ ವಹಿಸಿಕೊಳ್ಳಲು ಸಮರ್ಥರಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ.

ಕಾಂಗ್ರೆಸ್ ಪಕ್ಷದ ಸಿದ್ದಾಂತದಲ್ಲಿ ನಂಬಿಕೆ ಇಟ್ಟುಕೊಂಡಿರುವ ಎಲ್ಲಾ ರಾಜಕಾರಣಿಗಳಿಗೆ ಮಾದರಿಯಾಗಿ ನಮ್ಮನ್ನು ಮುನ್ನಡೆಸುವ ನಂಬಿಕೆ ಇದೆ. ತತ್ವ ಬದ್ಧತೆ ಇರುವ ನಾಯಕರು ಸಿಗುವುದು ಬಹಳ ಕಷ್ಟ. ಅಂತಹ ಕೆಲಸವನ್ನು ಜಾರಕಿಹೊಳಿ ಮಾಡುತ್ತಿದ್ದಾರೆ. ಆ ಕೆಲಸ ಇದೇ ರೀತಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಇದನ್ನೂ ಓದಿ : ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ: ಮಹಾ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ, ಝೇಂಕರಿಸಿದ ‘ಉಘೇ ಮಾದಪ್ಪ’ ಘೋಷಣೆ..!







