ಬೆಂಗಳೂರಿನಲ್ಲಿ ಪತ್ನಿ ಕಿರುಕುಳ ಆರೋಪ : ಖಾಸಗಿ ಕಂಪನಿ ಉದ್ಯೋಗಿ ಆತ್ಮಹತ್ಯೆ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪತ್ನಿ ಕಿರುಕುಳಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಲಿನೋವೋ ಕಂಪನಿಯ ಹಿರಿಯ ಉದ್ಯೋಗಿ ಪ್ರಶಾಂತ್ ನಾಯರ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಚಿಕ್ಕಬಾಣಾವರದ ಡಿ.ಎಕ್ಸ್ ಸ್ಮಾರ್ಟ್ ನೆಸ್ಟ್ ಅಪಾರ್ಟ್‌ಮೆಂಟ್‌ನಲ್ಲಿ ಪ್ರಶಾಂತ್ ನಾಯರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ 12 ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಮದುವೆಯಾಗಿದ್ದ. ಪೂಜಾ ನಾಯರ್ ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ದಂಪತಿಗೆ 8 ವರ್ಷದ ಮಗಳು ಸಹ ಇದ್ದಾಳೆ.

ಇತ್ತೀಚೆಗೆ ಪ್ರಶಾಂತ್ ಮತ್ತು ಪೂಜಾ ದಂಪತಿ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿತ್ತು. ಇದೀಗ ಪ್ರಶಾಂತ್​ಗೆ ಪತ್ನಿ ಪೂಜಾ ಟಾರ್ಚರ್ ಕೊಟ್ಟಿರುವ ಆರೋಪ ಕೇಳಿಬಂದಿದೆ. ಪ್ರಶಾಂತ್ ತಂದೆ ನಿನ್ನೆ ಹಲವು ಬಾರಿ ಕರೆ ಮಾಡಿದ್ರು ಪ್ರಶಾಂತ್ ಫೋನ್ ಪಿಕ್ ಮಾಡರಲಿಲ್ಲ. ಹಾಗಾಗಿ ಪ್ರಶಾಂತ್ ತಂದೆ ಅನುಮಾನಗೊಂಡು ಮನೆ ಬಳಿ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ‌‌ ಬಂದಿದೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಅಂತಿಮ ಘಟ್ಟ ತಲುಪಿದ ಸುಚೇಂದ್ರ ಪ್ರಸಾದ್ ನಿರ್ದೇಶನದ “ಪದ್ಮಗಂಧಿ” ಸಿನಿಮಾ!

Btv Kannada
Author: Btv Kannada

Read More