ಕಾರು-ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಿಕ್ಕಮಗಳೂರು : ಕಾರು – ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಬುಕ್ಕಸಾಗರ ಬಳಿ ನಡೆದಿದೆ. ಅನಿಸ್ (21) ಮೃತ ಯುವಕ.

ಮೃತ ಅನಿಸ್ ಮೂಲತಃ ಕೇರಳ ರಾಜ್ಯದ ಕಣ್ಣೂರು ನಿವಾಸಿಯಾಗಿದ್ದಾನೆ. ಅವರು ಕಡೂರು ಪಟ್ಟಣದಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ದತ್ತಪೀಠದಿಂದ ವಾಪಸ್ಸಾಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸದೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : 500 ರೂಪಾಯಿ ಚೇಂಜ್ ಹೆಸರಲ್ಲಿ 20 ಸಾವಿರಕ್ಕೆ ಕನ್ನ – ಆರೋಪಿ ಅರೆಸ್ಟ್!

Btv Kannada
Author: Btv Kannada

Read More