ಚಿತ್ರದುರ್ಗ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕುಡಿನೀರುಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೃಪಾ ಮೃತ ವಿದ್ಯಾರ್ಥಿನಿ.
ವಿಜ್ಞಾನ ವಿಭಾಗದಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಕೃಪಾ ನೇಣು ಬಿಗಿದುಕೊಂಡಿದ್ದಾಳೆ. ಚಂದ್ರಶೇಖರಪ್ಪ, ವೀಣಾ ದಂಪತಿಯ ಏಕೈಕ ಪುತ್ರಿ ಕೃಪಾ ದಾವಣಗೆರೆಯ ಪುಷ್ಪಾ ಮಹಲಿಂಗಪ್ಪ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಮಗಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ವಿ. ಸುನೀಲ್ ಕುಮಾರ್ ಪುತ್ರಿಗೆ ಶೇ 97 ಅಂಕ – ಮಗಳ PUC ಫಲಿತಾಂಶಕ್ಕೆ ಸಂತಸ ಹಂಚಿಕೊಂಡ ಬಿಜೆಪಿ ಶಾಸಕ!

Author: Btv Kannada
Post Views: 1,281