ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​ ಸಂತೋಷ್ ಭೇಟಿಯಾದ ವಿಜಯೇಂದ್ರ – ಹೋರಾಟದ ರೂಪುರೇಷೆ ಬಗ್ಗೆ ಚರ್ಚೆ!

ನವದೆಹಲಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​ ಸಂತೋಷ್ ಅವರನ್ನು ಇಂದು ಬಿ.ವೈ ವಿಜಯೇಂದ್ರ ಭೇಟಿ ಮಾಡಿದ್ದಾರೆ. ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿ, ರಾಜ್ಯದಲ್ಲಿ ಪಕ್ಷ ಸಂಘಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿ, ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​ ಸಂತೋಷ್ ಅವರ ಮಾರ್ಗದರ್ಶನ ಪಡೆದರು.

<iframe src="https://www.facebook.com/plugins/post.php?href=https%3A%2F%2Fwww.facebook.com%2FBYVijayendra%2Fposts%2Fpfbid0fHhAtx3uPuroHydVTyRsdYptWvcKHfGn3fKunCc4HYZ5Jgch3PLg5n8YdBd7Umchl&show_text=true&width=500" width="500" height="250" style="border:none;overflow:hidden" scrolling="no" frameborder="0" allowfullscreen="true" allow="autoplay; clipboard-write; encrypted-media; picture-in-picture; web-share"></iframe>

ಈ ಬಗ್ಗೆ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಪಕ್ಷದ ಸೈದ್ಧಾಂತಿಕತೆ, ವೈಚಾರಿಕ ಸ್ಪಷ್ಟತೆ ಹೊಂದಿರುವ ಸಂತೋಷ್ ಜೀ ಅವರ ಮಾತುಗಳು ನನ್ನಂತಹ ಲಕ್ಷಾಂತರ ಕಾರ್ಯಕರ್ತರಿಗೆ ಸದಾ ಸ್ಫೂರ್ತಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸ್ಯಾಂಡಲ್​ವುಡ್​ನಲ್ಲಿ ಎಸ್​. ನಾರಾಯಣ್ ಮತ್ತೆ ಕಮಾಲ್ – ಶ್ರೇಯಸ್ ಮಂಜು, ದುನಿಯಾ ವಿಜಯ್ ಸಿನಿಮಾ ‘ಮಾರುತ’ ಸೂಪರ್ ಹಿಟ್!

Btv Kannada
Author: Btv Kannada

Read More