ಮುರುಘಾ ಶ್ರೀಗಳಿಗೆ ಬಿಗ್ ರಿಲೀಫ್​ – ಮೊದಲ ಪೋಕ್ಸೋ ಪ್ರಕರಣದಲ್ಲಿ ನಿರ್ದೋಷಿ!

ಚಿತ್ರದುರ್ಗ : ಮುರುಘಾ ಶ್ರೀಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ನಿರ್ದೋಷಿ ಎಂದು ಚಿತ್ರದುರ್ಗದ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುರುಘಾ ಶ್ರೀ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್​​​​​​​​​ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ನಂತರ ನಜರಾಬಾದ್​​​​​ ಪೊಲೀಸರಿಂದ ಚಿತ್ರದುರ್ಗ ಪೊಲೀಸರಿಗೆ ಕೇಸ್​ ವರ್ಗಾವಣೆ ಆಗಿತ್ತು. ಇದೀಗ ಪೋಕ್ಸೋ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಯಾಗಿದ್ದು, ನ್ಯಾಯಾಧೀಶರಾದ ಗಂಗಾಧರಪ್ಪ ಹಡಪದ ಅವರಿಂದ ಮಹತ್ವದ ತೀರ್ಪು ನೀಡಿದ್ದಾರೆ. ಸಾಕ್ಷ್ಯಧಾರಗಳ ಕೊರತೆಯಿಂದ ಮುರುಘಾ ಸ್ವಾಮೀಜಿ ನಿರ್ದೋಷಿ ಎಂದು ಕೋರ್ಟ್​ ತೀರ್ಪು ಪ್ರಕಟಿಸಿದೆ. ಈ ಮೂಲಕ ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಏನಿದು ಪ್ರಕರಣ?

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ (POCSO Case) ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ : ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಫಸ್ಟ್ ಸಾಂಗ್ ರಿಲೀಸ್ – ಮಾದೇವನ ಪರಾಕಾಷ್ಠೆಯಲ್ಲಿ ಸತೀಶ್ ನೀನಾಸಂ!

Btv Kannada
Author: Btv Kannada

Read More