ದಾವಣಗೆರೆಯಲ್ಲಿ ಫುಡ್​​ ಆಫೀಸರ್ಸ್​​ ರೇಡ್ – ಅನ್ನಭಾಗ್ಯ ಯೋಜನೆಯ 50 ಕೆಜಿ ಅಕ್ಕಿ ವಶಕ್ಕೆ!

ದಾವಣಗೆರೆ : ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಫುಡ್​​ ಆಫೀಸರ್ಸ್​ ದಿಢೀರ್ ಕಾರ್ಯಾಚರಣೆ ನಡೆಸಿ, ಅನ್ನಭಾಗ್ಯ ಯೋಜನೆಯಡಿ ಅಕ್ರಮವಾಗಿ ಮಾರಾಟಕ್ಕೆ ಸಿದ್ಧವಾಗಿದ್ದ 50 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಆಹಾರ ನಿರೀಕ್ಷಕರು ನಜ್ರುಲ್, ಜಗದೀಶ್​​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಅನ್ನಭಾಗ್ಯ ಯೋಜನೆಯ ಉಚಿತ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಂತೆಯಲ್ಲಿ ಮಾರಾಟ ಮಾಡಲು ಮುಂದಾಗಿದ್ದರು. ದಾಳಿ ನಡೆಸಿದ ತಂಡ ಸುಮಾರು 50 ಕೆ.ಜಿ ತೂಕದ 48 ಚೀಲಗಳನ್ನು ವಶಕ್ಕೆ ಪಡೆದಿದೆ.

ಈ ಸಂಬಂಧ ಹರಿಹರ ನಗರದ ಟೌನ್ ಪೊಲೀಸ್ ಠಾಣೆಯಲ್ಲಿ PCR ದಾಖಲಾಗಿದೆ. ಆಹಾರ ನಿರೀಕ್ಷಕರು ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ ಸ್ಥಳೀಯ ಸಾರ್ವಜನಿಕರಿಂದ ಹಾಗೂ ಜನಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ : ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ಜ.2ಕ್ಕೆ ದೇಶದಾದ್ಯಂತ ರಿಲೀಸ್!

Btv Kannada
Author: Btv Kannada

Read More