ದೈವವನ್ನು ದೆವ್ವ ಎಂದಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ದ ದೂರು ದಾಖಲು!

ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವವನ್ನು ‘ದೆವ್ವ’ ಎಂಬ ಪದ ಉಪಯೋಗಿಸಿ ಕರೆದಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ರಣವೀರ್ ಸಿಂಗ್ ನೀಡಿರುವ ಹೇಳಿಕೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚೆಗೆ ಗೋವಾದಲ್ಲಿ ನಡೆದ ಇಂಟರ್‌ನ್ಯಾಷನಲ್ ಫಿಲಂ ಫೆಸ್ಟಿವಲ್ ಆಫ್ ಇಂಡಿಯಾ ಕಾರ್ಯಕ್ರಮದಲ್ಲಿಕಾಂತಾರ ಸಿನಿಮಾದ ಉಳ್ಳಾಳ್ತಿ ದೈವದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ನಟ ರಣವೀರ್ ಸಿಂಗ್ ವಿರುದ್ಧ ಇದೀಗ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ‘ಕಾಂತಾರ ಸೀಕ್ವೆಲ್‌’ನ ಸಿನಿಮಾವನ್ನು ನೋಡಿದ ನಟ ರಣವೀರ್ ಸಿಂಗ್ ಅವರು ಈ ಸಿನಿಮಾದಲ್ಲಿರುವ ‘ಚಾವುಂಡಿ ದೈವ’ವನ್ನು ಫೀಮೇಲ್ ಘೋಸ್ಟ್ ಎಂದು ಕರೆದು ಅದರ ನಟನೆಯ ಅನುಕರಣೆ ಮಾಡಿದ್ದರು. ಈ ಹಿನ್ನಲೆ ವಕೀಲ ಪ್ರಶಾಂತ್ ಮೇತಲ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ : ಬರ್ತಿದ್ದಾಳೆ “ಜೈ ಲಲಿತಾ”.. ಡಿ.8ರಿಂದ ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ ಶುರು!

Btv Kannada
Author: Btv Kannada

Read More