ಡಿವೈಡರ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು – ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಸಜೀವ ದಹನ!

ಹುಬ್ಬಳ್ಳಿ : ಡಿವೈಡರ್​ಗೆ ಕಾರು ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿದ್ದ ಲೋಕಾಯುಕ್ತ ಇನ್ಸ್​​ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಸಜೀವ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರಹೊಲವಯದಲ್ಲಿ ನಡೆದಿದೆ.

ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಆಗಿದ್ದ ಪಂಚಾಕ್ಷರಯ್ಯ ಸಾಲಿಮಠ ಅವರು ಗದಗದಲ್ಲಿರುವ ತಮ್ಮ ಕುಟುಂಬವನ್ನು ನೋಡಲು ಹೊರಟಿದ್ದರು. ಈ ವೇಳೆ I20 ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಧಗಧಗ ಹೊತ್ತಿ ಉರಿದಿದೆ. ಕಾರಿನಿಂದ ಹೊರಬರಲಾರದೆ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರು ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಆಗಿದ್ದ ಪಂಚಾಕ್ಷರಯ್ಯ ಸಾಲಿಮಠ ಸಜೀವ ದಹನವಾಗಿದ್ದಾರೆ. ಈ ಫಟನೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ನಟ ದರ್ಶನ್‌ ಬೆನ್ನುನೋವು ನಾಟಕ ಬಯಲು? ವೈದ್ಯರು ಹೇಳಿದ್ದೇನು?

Btv Kannada
Author: Btv Kannada

Read More