ಯಾದಗಿರಿ : ಬುಲೆರೊ-ಸಾರಿಗೆ ಬಸ್ ಮಧ್ಯೆ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು!

ಯಾದಗಿರಿ : ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದವರಾದ ಬುಲೆರೊ ಚಾಲಕ ಶರಣಪ್ಪ(30), ಸುನೀತಾ(19), ಸೋಮವ್ವ(50) ಮತ್ತು ತಂಗಮ್ಮ(55) ಮೃತ ದುರ್ದೈವಿಗಳು. ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಬುಲೆರೋ ವಾಹನದಲ್ಲಿದ್ದ ಇನ್ನು ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ : ಉಡುಪಿ : ಮಳೆಯ ಮಧ್ಯೆಯೂ ನಡೆದ ದೈವದ ನೇಮೋತ್ಸವ!

Btv Kannada
Author: Btv Kannada

Read More