ಬೆಂಗಳೂರು : ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಬಿಎಂಟಿಸಿ ಬಸ್ನಲ್ಲಿ ಕುಳಿತಿದ್ದ ದೊಡ್ಡಬೊಮ್ಮಯ್ಯ ಅವರು ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಬೆಳಗಾವಿ ಅಧಿವೇಶನ ವರದಿಗೆ ಹೋಗಿದ್ದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಅಧಿವೇಶನ ಮುಗಿದ ಹಿನ್ನಲೆ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಾಸ್ ಆಗಿದ್ದರು. ಮೆಜೆಸ್ಟಿಕ್ಗೆ ಬಂದು ಬಿಎಂಟಿಸಿ ಬಸ್ ಮೂಲಕ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ.

ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ, ದೂರದರ್ಶನ, ಆಕಾಶವಾಣಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ : ಆಟವಾಡ್ತಿದ್ದ ಬಾಲಕನಿಗೆ ಕಾಲಿಂದ ಒದ್ದ ಕೇಸ್ – ಆರೋಪಿ ರಂಜನ್ಗೆ ಮಾನಸಿಕ ಸಮಸ್ಯೆ? ಕುಟುಂಬಸ್ಥರಿಂದ ಪೊಲೀಸರಿಗೆ ಮಾಹಿತಿ!
Author: Btv Kannada
Post Views: 261







