ಮಂಡ್ಯ : ಇಂದು ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ನಡೆಯಿತು. ಸಾಲಗಾರರಲ್ಲದ ಕ್ಷೇತ್ರದಲ್ಲಿ ಚುನಾವಣಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಪುತ್ರ ಸಚಿನ್ ಜಯ ಗಳಿಸಿದ್ದಾರೆ.
ಪ್ರತಿ ಸ್ಪರ್ಧಿ ಜವರೇಗೌಡ ವಿರುದ್ಧ ಸಚಿವ ಎನ್.ಚಲುವರಾಯಸ್ವಾಮಿ ಅವರ ಪುತ್ರ ಸಚಿನ್ 260 ಮತಗಳನ್ನು ಪಡೆದು ಗೆದ್ದು ಬೀಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಮ್ಮ ಪುತ್ರ ಸಚಿನ್ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡಿಸಿದ್ದಾರೆ.
‘ಹ್ಯಾಪಿ ಬರ್ತ್ ಡೇ’ ಸಿನಿಮಾ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ಸಚಿನ್ ಆನಂತರದಲ್ಲಿ ‘ಮಂಡ್ಯ ಬಾಯ್ಸ್’ ಚಿತ್ರದಲ್ಲೂ ನಟಿಸಿದ್ದರು. ಚಿತ್ರರಂಗದಿಂದ ದೂರ ಉಳಿದ ಬಳಿಕ ಇಲ್ಲಿಯವರೆಗೆ ತಂದೆ ಚಲುವರಾಯಸ್ವಾಮಿ ಅವರೊಂದಿಗೆ ಹಲವು ರಾಜಕೀಯ ಸಭೆ, ಸಮಾರಂಭಗಳಲ್ಲಿ ವೇದಿಕೆ ಹಂಚಿಕೊಳ್ಳುತ್ತಿದ್ದ ಸಚಿನ್ ಇದೀಗ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗೆದ್ದಿದ್ದಾರೆ.
ಇದನ್ನೂ ಓದಿ : ಹುಬ್ಬಳ್ಳಿ : 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಆರೋಪ – ಪೊಲೀಸ್ ಠಾಣೆ ಮುಂದೆ ಭುಗಿಲೆದ್ದ ಕುಟುಂಬಸ್ಥರ ಆಕ್ರೋಶ!
