ಸ್ಯಾಂಡಲ್​ವುಡ್ ಗಣ್ಯರಿಂದ “ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1” ಜೆರ್ಸಿ ಹಾಗೂ ಟ್ರೋಫಿ ಅನಾವರಣ!

ನಿರ್ಮಾಪಕ ಮಾಧವಾನಂದ ಅವರ ಕನ್ನಡ ಒಟಿಟಿ ಅರ್ಪಿಸುವ “ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 MCL” ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‌ನ ಅಧಿಕೃತ ಜೆರ್ಸಿ, ಟ್ರೋಫಿ ಅನಾವರಣ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ನಗರದ ದಿ ಸೋಡಾ ಫ್ಯಾಕ್ಟರಿಯಲ್ಲಿ ಅದ್ದೂರಿಯಾಗಿ ನೆರವೇರಿತು.

ಸಾ.ರಾ ಗೋವಿಂದು, ಬಿ ಆರ್ ಲಕ್ಷ್ಮಣರಾವ್, ಜೋಗಿ, ಭರಮಣ್ಣ ಉಪ್ಪಾರ್ (ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯಕ್ಷರು ಕರ್ನಾಟಕ ಸರಕಾರ), ತಾರಾ ಅನುರಾಧ, ಸುಂದರರಾಜ್, ಎನ್.ಎಂ ಸುರೇಶ್, ಪ್ರವೀಣ್ ಕುಮಾರ್, ಭಾ.ಮ.ಹರೀಶ್, ವಿಕ್ರಮ್ ಸೂರಿ, ನಮಿತಾ ರಾವ್, ಜಾನ್ಹವಿ, ಅಪೂರ್ವ, ಸತೀಶ್ ಕಾಡ್ ಬಾಮ್, ರಾಜ್ ಕಪ್ ರೂವಾರಿ ರಾಜೇಶ್ ಬ್ರಹ್ಮಾವರ್, SWCLನ ಪೀಟರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ “MCL” ಸೀಸನ್ 1 ಯಶಸ್ವಿಯಾಗಲೆಂದು ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ ಹಾರೈಸಿದರು.

ಈ ಟೂರ್ನಿಯಲ್ಲಿ ಆರು ತಂಡಗಳು ಭಾಗವಹಿಸಲಿದ್ದು, ಎಮ್.ಸಿ.ಎಲ್ ಟೈಮ್ಸ್ insight ವಾರಿಯರ್ಸ್ ಓನರ್ ಶರತ್ ಕುಮಾರ್ ಎಸ್, ಎನ್.ಎಸ್.ಆರ್ ರೈಡರ್ಸ್ ಓನರ್ ರಘುಕುಮಾರ್ ಬಿ, ವಿ ಪಿ ಚಾಲೆಂಜರ್ಸ್ ಓನರ್ ಆರ್ ಎಸ್ ಮಹೇಶ್, ಪಿ ಆರ್ ಎಮ್ ಟೈಟನ್ಸ್ ಓನರ್ ಪ್ರೇಮ ಗೌಡ, ಕ್ಲಾಸಿಕ್ ಕ್ವೀನ್ ಓನರ್ ಲಕ್ಷ್ಮಣ ಉಪ್ಪಾರ್, ಆರ್ ಜೆ ರಾಯಲ್ ಓನರ್ ರೇನೇಶ್ ಸೇರಿದಂತೆ ಸೆಲೆಬ್ರಿಟಿ ಪ್ಲೇಯರ್ ಗಳಾದ ಸ್ಫೂರ್ತಿ ವಿಶ್ವಾಸ, ಜಯಲಕ್ಷ್ಮಿ, ಕವಿತಾ ಕಂಬಾರ, ಪ್ರೇಮ ಗೌಡ, ವಾಣಿಶ್ರೀ ಸೇರಿದಂತೆ ಆಟಗಾರರೆಲ್ಲ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಖ್ಯಾತ ನಿರೂಪಕ ಹರೀಶ್ ನಾಗರಾಜ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಣೆ ಮಾಡಿದರು.

“MCL” ಟೂರ್ನಮೆಂಟ್​ನ ನಿರ್ಮಾಪಕ ಮಾಧವಾನಂದ ಜೊತೆಗೆ ಕುಮಾರ್, ಮೀನಾ ಗೌಡ ಹಾಗೂ ಕಲಾವಿದೆ ರೇಣು ಶಿಖಾರಿಯವರು ಸಮಾರಂಭವನ್ನು ಅಯೋಜಿಸಿದ್ದರು. “MCL” ಸೀಸನ್ 1ರ ಪಂದ್ಯಗಳು ಪಂದ್ಯಗಳು ಜನವರಿ 17ರಂದು ಬೆಂಗಳೂರಿನ ಅಶೋಕ್ ರೈಸಿಂಗ್ ಸ್ಟಾರ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

ಇದನ್ನೂ ಓದಿ : ಆಸ್ಕರ್ ಅಂಗಳದಲ್ಲಿ ಹೊಂಬಾಳೆ ಫಿಲ್ಮ್ಸ್‌ ಅಬ್ಬರ – ‘ಅತ್ಯುತ್ತಮ ಚಿತ್ರ’ ವಿಭಾಗದ ಪಟ್ಟಿಯಲ್ಲಿ ಕಾಂತಾರ-1, ಮಹಾವತಾರ ನರಸಿಂಹ!

Btv Kannada
Author: Btv Kannada

Read More