ಸಿಎಂ ಸಿದ್ದರಾಮಯ್ಯಗೆ ಬಿಗ್​ ಶಾಕ್​​.. ಮುಡಾ ಕೇಸ್ ತನಿಖೆ ಮುಂದುವರೆಸಲು ‘ಲೋಕಾ’ಗೆ ಕೋರ್ಟ್​ ಸೂಚನೆ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ “ಬಿ” ವರದಿಗೆ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಬಿ ರಿಪೋರ್ಟ್ ಬಗ್ಗೆ ಸದ್ಯ ಯಾವುದೇ ಆದೇಶ ನೀಡುವುದಿಲ್ಲ ಎಂದು ಕೋರ್ಟ್​ ಹೇಳಿದೆ.

ತನಿಖೆ ಮುಂದುವರಿಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದ್ದು, ಅಂತಿಮ ವರದಿ ಬಂದ ಬಳಿಕವೇ ಬಿ ರಿಪೋರ್ಟ್ ಬಗ್ಗೆ ಆದೇಶ ನೀಡುವುದಾಗಿ ಪೀಠ ಹೇಳಿದೆ. ಮುಂದಿನ ವಿಚಾರಣೆಯನ್ನು ಮೇ.7ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ : ಹುಬ್ಬಳ್ಳಿ ಕಾಮುಕನ ಎನ್ಕೌಂಟರ್ ಕೇಸ್ – ಆರೋಪಿ ಮೃತದೇಹ ಶವಸಂಸ್ಕಾರಕ್ಕೆ ತಡೆ ಕೋರಿ ಹೈಕೋರ್ಟ್​ಗೆ ಮನವಿ!

Btv Kannada
Author: Btv Kannada

Read More