ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಜಾತಿ ಜನ ಗಣತಿ ವರದಿ ವಿಚಾರ ಭಾರೀ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ನಲ್ಲಿ ಜಾತಿ ಗಣತಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರನ್ನು ಸಭೆ ಕರೆದಿದ್ದರು.
ಇಂದು ಸಂಜೆ 6 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಸರ್ಕಾರಿ ನಿವಾಸದಲ್ಲಿ ಸಭೆ ನಡೆಯಿತು. ಸಭೆಗೆ ಒಕ್ಕಲಿಗ ಸಚಿವರು, ಶಾಸಕರು, ಎಂಎಲ್ಸಿಗಳಿಗೆ ಆಹ್ವಾನ ನೀಡಲಾಗಿತ್ತು. ಆದರೆ ಈ ಸಭೆಗೆ ಒರ್ವ ಸಚಿವರು ಮತ್ತು ಒಕ್ಕಲಿಗ ಶಾಸಕರು ಗೈರಾಗಿದ್ದಾರೆ.
ಸಚಿವ ಕೆ. ವೆಂಕಟೇಶ್ ಸಭೆಗೆ ಗೈರಾಗಿದ್ದು, ಒಕ್ಕಲಿಗ ಶಾಸಕರಾದ ಎಂ. ಕೃಷ್ಣಪ್ಪ, ಸುಬ್ಬಾರೆಡ್ಡಿ, ರಮೇಶ್ ಬಂಡಿಸಿದ್ದೇಗೌಡ, ಮಂಥರ್ ಗೌಡ, ರಾಜೇಗೌಡ ಕೂಡ ಸಭೆಗೆ ಗೈರಾಗಿದ್ದಾರೆ.
ಇದನ್ನೂ ಓದಿ : ಹಾಸನ : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಸ್ಥಳದಲ್ಲೇ ಮಹಿಳೆ ಸಾವು!

Author: Btv Kannada
Post Views: 1,038