ಚಿನ್ನಸ್ವಾಮಿಯಲ್ಲಿ ಇಂದು ಆರ್‌ಸಿಬಿ-ಪಂಜಾಬ್ ಬಿಗ್ ಫೈಟ್ – ಪಂದ್ಯಕ್ಕೆ ​ಮಳೆ ಅಡ್ಡಿಯಾಗುವ ಆತಂಕ.. IMD ಅಲರ್ಟ್!

ಬೆಂಗಳೂರು : ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಪಂಜಾಬ್ ಕಿಂಗ್ಸ್ ಬ್ಯಾಟಲ್​ಗೆ ಕೌಂಟ್​ಡೌನ್​​ ಶುರುವಾಗಿದೆ. ಚಿನ್ನಸ್ವಾಮಿ ಬ್ಯಾಟಲ್​ ಗ್ರೌಂಡ್​ನಲ್ಲಿ ಇಂದು ಮುಖಾಮುಖಿಯಾಗ್ತಿರುವ ಉಭಯ ತಂಡಗಳ ಫೈಟ್​​ ಭಾರೀ ಕ್ಯೂರಿಯಾಸಿಟಿ ಹುಟ್ಟು ಹಾಕಿದೆ. ತವರಿನಲ್ಲಿ ಆಡ್ತಿರೋ 3ನೇ ಪಂದ್ಯವನ್ನಾದರೂ ಗೆಲ್ಲೋಕೆ ಪಣ ತೊಟ್ಟಿರುವ ಆರ್​ಸಿಬಿಗೆ ಪಂಜಾಬ್ ಕಿಂಗ್ಸ್ ಎದುರು ಟಫ್​​ ಟಾಸ್ಕ್​ ಎದುರಾಗಲಿದೆ.

ಹೌದು.. ರಾಜಸ್ಥಾನ್​ ವಿರುದ್ಧ ರಾಯಲ್​ ಜಯ ಸಾಧಿಸಿದ ಆರ್​​ಸಿಬಿ ಇದೀಗ ಪಂಜಾಬ್​ಗೆ ಪಂಚ್​ ಕೊಡೋಕೆ ರೆಡಿಯಾಗಿದೆ. ಹೋಮ್​​ಗ್ರೌಂಡ್​ನಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿರೋ ಆರ್​​ಸಿಬಿ, ಪಂಜಾಬ್​ ಕಿಂಗ್​ ಮಣಿಸುವ ಕನಸಿನಲ್ಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​​ಸಿಬಿ ಗೆದ್ದು ಬೀಗಬೇಕಂದ್ರೆ ಪಂಜಾಬ್​ ಪವರ್​​​ನ ಕಟ್​ ಮಾಡಬೇಕಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಲ್ಪ ರನ್​​ಗಳಿಗೆ ಆಲೌಟ್ ಮಾಡಿ ಐತಿಹಾಸಿಕ ಜಯ ಸಾಧಿಸಿದೆ. ಹೀಗಾಗಿ ಬಲಿಷ್ಠ ತಂಡವೆನಿಸಿಕೊಂಡಿರೋ ಪಂಜಾಬ್​ನ ಮಣಿಸಲು ಆರ್‌ಸಿಬಿ ಆಟಗಾರರು ಮಾಸ್ಟರ್ ಪ್ಲಾನ್ ರೂಪಿಸಬೇಕಿದೆ. ಪಂಜಾಬ್ ಕಿಂಗ್ಸ್ ಈವರೆಗೆ ಆಡಿದ 6 ಪಂದ್ಯಗಳಲ್ಲಿ 4 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಇದೀಗ ದುಪ್ಪಟ್ಟು ಆತ್ಮ ವಿಶ್ವಾಸದೊಂದಿಗೆ ಆರ್‌ಸಿಬಿಯನ್ನು ಎದುರಿಸಲು ಸಿದ್ಧವಾಗಿದೆ. ಈ ಕಾದಾಟವು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ : ಇನ್ನು ಆರ್​ಸಿಬಿ- ಪಂಜಾಬ್​ನ ಹೈವೋಲ್ಟೇಜ್​ ಪಂದ್ಯಕ್ಕೆ ಮಳೆ ಅಡ್ಡಿ ಆಗೋ ಆತಂಕವಿದೆ. ಇಂದು ಸಂಜೆ 7:30ಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪ್ರತಿಷ್ಠೆಯ ಪಂದ್ಯದ ಸಮಯದಲ್ಲಿ ಹವಾಮಾನ ಹೇಗಿದೆ ಎಂದರೆ ಮಳೆಯಿಂದ ಸ್ವಲ್ಪ ತೊಂದರೆ ಆಗುವ ಸಾಧ್ಯತೆ ಇದೆ. ಈ ಮಳೆ ಪಂದ್ಯದ ಆರಂಭದಲ್ಲಿ ಮಾತ್ರ ನಿರೀಕ್ಷೆ ಮಾಡಬಹುದು. ನಂತರ ಮಳೆ ನಿಂತು ಹೋಗುತ್ತದೆ. ಆದರೆ ಪಂದ್ಯ ಸುಗಮವಾಗಿ ನಡೆಯುತ್ತದೆ ಎನ್ನಲಾಗಿದೆ.

ಇನ್ನು ಎಂ. ಚಿನ್ನಸ್ವಾಮಿ ಮೈದಾನದ ಪಿಚ್ ಬ್ಯಾಟಿಂಗ್ ಸ್ನೇಹಿ ಆದರೂ ಸ್ಪಿನ್ನರ್​ಗಳಿಗೆ ಹೆಚ್ಚು ಅನುಕೂಲಕರ. ಹೀಗಾಗಿ ಈ ಮೈದಾನದಲ್ಲಿ ಟಾಸ್ ಗೆದ್ದವರೇ ಬಾಸ್ ಎನ್ನಬಹುದು.

ಲೈವ್ : ಪಂದ್ಯದ ​ನೇರಪ್ರಸಾರವನ್ನ ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ ಹಾಗೂ ಜಿಯೋ ಹಾಟ್​ಸ್ಟಾರ್​ನಲ್ಲಿ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ : ವಕ್ಫ್ ವಿರುದ್ಧ ಪ್ರತಿಭಟನೆ : ಮಂಗಳೂರಿನಲ್ಲಿ ಹೆದ್ದಾರಿ ತಡೆಯುವುದಕ್ಕೆ ಹೈಕೋರ್ಟ್ ನಿರ್ಬಂಧ!

Btv Kannada
Author: Btv Kannada

Read More

Read More