ಹುಳಿಮಾವು ಕೋದಂಡರಾಮಸ್ವಾಮಿ ದೇವಸ್ಥಾನದ ಜಾತ್ರಾ ಉತ್ಸವ ಸಂದರ್ಭದಲ್ಲಿ ಹೆಲಿಕ್ಯಾಪ್ಟರ್ ಮೂಲಕ ಪುಷ್ಪಾರ್ಚನೆಗೆ ಹೈಕೋರ್ಟ್ ಸಮ್ಮತಿ!

ಬೆಂಗಳೂರು : ನಗರದ ಪ್ರಸಿದ್ದ ಹುಳಿಮಾವು ಕೋದಂಡರಾಮಸ್ವಾಮಿ ದೇವಸ್ಥಾನದ ಜಾತ್ರೆ ಉತ್ಸವದ ಸಂದರ್ಭದಲ್ಲಿ ಹೆಲಿಕ್ಯಾಪ್ಟರ್ ಮೂಲಕ ಪುಷ್ಪಾರ್ಚನೆ ನಡೆಸಲು ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿದೆ.

ಪ್ರತಿ ವರ್ಷವೂ ಅತ್ಯಂತ ಅದ್ದೂರಿಯಾಗಿ ನಡೆಯುವ ಹುಳಿಮಾವು ಕೋದಂಡರಾಮಸ್ವಾಮಿ ಜಾತ್ರಾ ಮಹೋತ್ಸವದ ರಥೋತ್ಸವದಲ್ಲಿ ಕಳೆದ 2005ರಿಂದಲೂ ಹೆಲಿಕ್ಯಾಪ್ಟರ್ ಮೂಲಕ ಪುಷ್ಪಾರ್ಚನೆ ನಡೆಯುತ್ತಿತ್ತು. ಡೆಕ್ಕನ್ ಏವಿಯೇಷನ್ ಹೆಲಿಕ್ಯಾಪ್ಟರ್ ಸಂಸ್ಥೆ ಈ ಪುಷ್ಪಾರ್ಚನೆಯನ್ನು ನಡೆಸುತ್ತಿತ್ತು. ಆದರೆ ಈ ಬಾರಿ ಪೊಲೀಸ್ ಇಲಾಖೆ ಅದಕ್ಕೆ ಅನುಮತಿ ನೀಡಿರಲಿಲ್ಲ.

ಈ ಹಿನ್ನೆಲೆ ಕೋದಂಡರಾಮಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹೈಕೋರ್ಟ್ ಮೊರೆ ಹೋಗಿತ್ತು. ಇದೀಗ ಆಡಳಿತ ಮಂಡಳಿಯ ಮನವಿ ಪರಿಗಣಿಸಿದ ರಾಜ್ಯ ಹೈಕೋರ್ಟ್, ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನಡೆಸಲು ಅನುಮತಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ. ಹೈಕೋರ್ಟ್ ಸೂಚನೆಯಂತೆ ಪೊಲೀಸ್ ಇಲಾಖೆಯೂ ಅನುಮತಿ ಪತ್ರವನ್ನು ನೀಡಿದೆ.

 

ಇದನ್ನೂ ಓದಿ : ಬೀದರ್​ನಲ್ಲಿ ಅರಣ್ಯಾಧಿಕಾರಿಗಳಿಂದ ಪತ್ರಕರ್ತನ ಮೇಲೆ ಹಲ್ಲೆ – ಕೂಡಲೇ ಶಿಸ್ತು ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ!

Btv Kannada
Author: Btv Kannada

Read More

Read More