ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ದ್ವೇಷ ಭಾಷಣ ಮಾಡಿರುವ ಆರೋಪದಡಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ವಕ್ತಾರ ಎಲ್. ಸೂರ್ಯ ಮುಕುಂದರಾಜ್ ದೂರು ದಾಖಲಿಸಿದ್ದಾರೆ. ಇಬ್ಬರ ವಿರುದ್ದವು ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಕಾಂಗ್ರೆಸ್ ವಕ್ತಾರ ಎಲ್. ಸೂರ್ಯ ಮುಕುಂದರಾಜ್ ಪತ್ರ ಬರೆದಿದ್ದಾರೆ.
ಅಶೋಕ್ ಅವರು ತಮ್ಮ ಭಾಷಣದಲ್ಲಿ ‘ಮುಸ್ಲಿಮರನ್ನು ಓಲೈಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಮುಂದಾಗಿದ್ದಾರೆ. ಅದಕ್ಕೆ ಎಲ್ಲಾ ಜಾತಿಗಳನ್ನು ಒಡೆದು ಹಾಕಿದ್ದಾರೆ’ ಎಂದು ಹೇಳಿದ್ದಾರೆ.
‘ವಿಜಯೇಂದ್ರ ಅವರು ವಿದೇಶಕ್ಕೆ ಶಿಕ್ಷಣಕ್ಕಾಗಿ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ₹30 ಲಕ್ಷ ನೆರವು ಹಿಂದೂ ವಿದ್ಯಾರ್ಥಿಗಳಿಗೆ ಏಕಿಲ್ಲ? ಎಂದು ಹೇಳುವ ಮೂಲಕ ಧರ್ಮಗಳ ನಡುವೆ ದ್ವೇಷ ಮೂಡಿಸುವ ಹೇಳಿಕೆ ನೀಡಿದ್ದಾರೆ. ಹಾಗಾಗಿ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಇಬ್ಬರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಸಂಬಂಧಿಸಿದ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದು ಕಾಂಗ್ರೆಸ್ ವಕ್ತಾರ ಎಲ್. ಸೂರ್ಯ ಮುಕುಂದರಾಜ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ – ಫೇಸ್ಬುಕ್ನಲ್ಲಿ ವಿಡಿಯೋ ಪೋಸ್ಟ್ ಮಾಡಿ ನೇಣಿಗೆ ಶರಣು!
