ಬೆಳಗಾವಿಯಲ್ಲಿ ತಾಯಿ, ಮಗ ಜೋಡಿ ಕೊಲೆ ಪ್ರಕರಣ – ಪೊಲೀಸರಿಗೆ ಹೆದರಿ ಆರೋಪಿ ನೇಣಿಗೆ ಶರಣು!

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಭಾನುವಾರ ನಡೆದಿದ್ದ ತಾಯಿ, ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನೇಣಿಗೆ ಶರಣಾಗಿದ್ದಾನೆ. ಅಥಣಿ ತಾಲೂಕಿನ ಕೊಡಗಾನೂರ್ ಗ್ರಾಮದಲ್ಲಿ ಏಪ್ರಿಲ್ 13 ರಂದು ಚಂದ್ರವ್ವ ಈಚೇರಿ ಹಾಗೂ ವಿಠ್ಠಲ ಈಚೇರಿ ತಾಯಿ ಮಗನ ಕೊಲೆ ಮಾಡಿ ಆರೋಪಿಗಳು ಕಬ್ಬಿನ ಕದ್ದೆಯಲ್ಲಿ ಶವ ಎಸೆದು ಹೋಗಿದ್ದರು.

ಪೊಲೀಸರ ತನಿಖೆಗೆ ಹೆದರಿ ಶೇಗುನಶಿ ಗ್ರಾಮದ 36 ವರ್ಷದ ಸುರೇಶ ರಾಮಪ್ಪ ಸವದತ್ತಿ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 35 ವರ್ಷದ ಶ್ರೀಶೈಲ್ ಸಂಗಪ್ಪ ಹೊರಟ್ಟಿ ಕೊಲೆ ಆರೋಪಿ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾನೆ. ಜೋಡಿ ಕೊಲೆ ಹಿನ್ನೆಲೆ ಶೇಗುಣಶಿ ಮೂಲದ ಇಬ್ಬರು ಆರೋಪಿಗಳ ತನಿಖೆ ಆರಂಭವಾದ ಹಿನ್ನೆಲೆ ಓರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಒಬ್ಬ ಬಚಾವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ಬ್ರಾಹ್ಮಣರನ್ನು ನೇರವಾಗಿ ಟಾರ್ಗೆಟ್ ಮಾಡಲಾಗ್ತಿದ್ಯಾ ? – ವಿದ್ಯಾರ್ಥಿ ಜನಿವಾರಕ್ಕೆ ಕತ್ತರಿ, ಪ್ರೊಟೆಸ್ಟ್​.. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ!

Btv Kannada
Author: Btv Kannada

Read More