ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು.. ಭರ್ಜರಿ ಗೆಲುವಿನೊಂದಿಗೆ 2ನೇ ಸ್ಥಾನಕ್ಕೆ ಲಗ್ಗೆಯಿಟ್ಟ ಪಂಜಾಬ್ ಕಿಂಗ್ಸ್!

ಬೆಂಗಳೂರು : ಪಂಜಾಬ್ ಕಿಂಗ್ಸ್ ವಿರುದ್ಧ ಚಿನ್ನಸ್ವಾಮಿ ಮೈದಾನದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಹೀನಾಯ ಸೋಲು ಕಂಡಿದೆ. ತವರಿನಲ್ಲಿ ಸತತ 3ನೇ ಪಂದ್ಯದಲ್ಲಿ ಬ್ಯಾಟರ್​ಗಳ ಸಂಪೂರ್ಣ ವೈಫಲ್ಯದಿಂದ RCB ಹೀನಾಯ ಸೋಲನುಭವಿಸಿದೆ.

ಮಳೆಯಿಂದ 14 ಓವರ್​ಗಳಿಗೆ ಕಡಿತವಾಗಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 9 ವಿಕೆಟ್ ಕಳೆದುಕೊಂಡು 95 ರನ್​ಗಳಿಸಿತ್ತು. 96ರನ್​ಗಳ ಗುರಿಯನ್ನ ಪಂಜಾಬ್ ಕಿಂಗ್ಸ್ 13 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಈ ಗೆಲಯವಿನೊಂದಿಗೆ ಪಂಜಾಬ್ ಅಂಕಪಟ್ಟಿಯಲ್ಲಿ 5ನೇ ಗೆಲುವು ಪಡೆದು 2ನೇ ಸ್ಥಾನಕ್ಕೇರಿದೆ.

96 ರನ್​​ಗಳ ಸುಲಭ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಕೂಡ 96 ರನ್​ಗಳ ಅಲ್ಪ ಮೊತ್ತದ ಗುರಿಯನ್ನ ಸುಲಭವಾಗಿ ಬೆನ್ನಟ್ಟಲಿಲ್ಲ. 12. ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಷ್ಟಪಟ್ಟು ಗೆಲುವು ಸಾಧಿಸಿತು. ಆರಂಭಿಕರಾದ ಪ್ರಭಸಿಮ್ರನ್ ಸಿಂಗ್ 11 ಎಸೆತಗಳಲ್ಲಿ 16 ಭುವನೇಶ್ವರ್ ಬೌಲಿಂಗ್​​ನಲ್ಲಿ ಟಿಮ್ ಡೇವಿಡ್​ಗೆ ಕ್ಯಾಚ್ ನೀಡಿದರು. ನಂತರ 4ನೇ ಓವರ್​​ನಲ್ಲಿ ಪ್ರಿಯಾಂಶ್ ಆರ್ಯ 9 ಎಸೆತಗಳಲ್ಲಿ 13 ರನ್​ಗಳಿಸಿ ಹ್ಯಾಜಲ್​ವುಡ್​ಗೆ ವಿಕೆಟ್ ಒಪ್ಪಿಸಿದರು. ನಂತರ ಹ್ಯಾಜಲ್​ವುಡ್ 8ನೇ ಓವರ್​ನಲ್ಲಿ ಪಂಜಾಬ್ ನಾಯಕ ಶ್ರೇಯಸ್​ ಅಯ್ಯರ್ (7) ಹಾಗೂ ಜೋಶ್ ಇಂಗ್ಲಿಸ್​(14) ವಿಕೆಟ್ ಪಡೆದು ಆರ್​​ಸಿಬಿಗೆ ಗೆಲುವಿನ ಆಸೆ ಮೂಡಿಸಿದ್ದರು.

ಒಂದು ಹಂತದಲ್ಲಿ ಪಂಜಾಬ್​​ 53 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಆದರೆ ನೆಹಾಲ್ ವಧೇರಾ ಅದಕ್ಕೆ ಅವಕಾಶ ಕೊಡಲಿಲ್ಲ. ಅವರು 19 ಎಸೆತಗಳಲ್ಲಿ 3 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 33 ರನ್​ಗಳಿಸಿ ತಂಡವನ್ನು ಗೆಲುವಿನ ಗಡಿ ದಾಟಿಸಿದರು.

ಇದನ್ನೂ ಓದಿ : ಬೆಳಗಾವಿಯಲ್ಲಿ ತಾಯಿ, ಮಗ ಜೋಡಿ ಕೊಲೆ ಪ್ರಕರಣ – ಪೊಲೀಸರಿಗೆ ಹೆದರಿ ಆರೋಪಿ ನೇಣಿಗೆ ಶರಣು!

Btv Kannada
Author: Btv Kannada

Read More