ಬೆಂಗಳೂರು : ಪಂಜಾಬ್ ಕಿಂಗ್ಸ್ ವಿರುದ್ಧ ಚಿನ್ನಸ್ವಾಮಿ ಮೈದಾನದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಹೀನಾಯ ಸೋಲು ಕಂಡಿದೆ. ತವರಿನಲ್ಲಿ ಸತತ 3ನೇ ಪಂದ್ಯದಲ್ಲಿ ಬ್ಯಾಟರ್ಗಳ ಸಂಪೂರ್ಣ ವೈಫಲ್ಯದಿಂದ RCB ಹೀನಾಯ ಸೋಲನುಭವಿಸಿದೆ.
ಮಳೆಯಿಂದ 14 ಓವರ್ಗಳಿಗೆ ಕಡಿತವಾಗಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 9 ವಿಕೆಟ್ ಕಳೆದುಕೊಂಡು 95 ರನ್ಗಳಿಸಿತ್ತು. 96ರನ್ಗಳ ಗುರಿಯನ್ನ ಪಂಜಾಬ್ ಕಿಂಗ್ಸ್ 13 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಈ ಗೆಲಯವಿನೊಂದಿಗೆ ಪಂಜಾಬ್ ಅಂಕಪಟ್ಟಿಯಲ್ಲಿ 5ನೇ ಗೆಲುವು ಪಡೆದು 2ನೇ ಸ್ಥಾನಕ್ಕೇರಿದೆ.
96 ರನ್ಗಳ ಸುಲಭ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಕೂಡ 96 ರನ್ಗಳ ಅಲ್ಪ ಮೊತ್ತದ ಗುರಿಯನ್ನ ಸುಲಭವಾಗಿ ಬೆನ್ನಟ್ಟಲಿಲ್ಲ. 12. ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಷ್ಟಪಟ್ಟು ಗೆಲುವು ಸಾಧಿಸಿತು. ಆರಂಭಿಕರಾದ ಪ್ರಭಸಿಮ್ರನ್ ಸಿಂಗ್ 11 ಎಸೆತಗಳಲ್ಲಿ 16 ಭುವನೇಶ್ವರ್ ಬೌಲಿಂಗ್ನಲ್ಲಿ ಟಿಮ್ ಡೇವಿಡ್ಗೆ ಕ್ಯಾಚ್ ನೀಡಿದರು. ನಂತರ 4ನೇ ಓವರ್ನಲ್ಲಿ ಪ್ರಿಯಾಂಶ್ ಆರ್ಯ 9 ಎಸೆತಗಳಲ್ಲಿ 13 ರನ್ಗಳಿಸಿ ಹ್ಯಾಜಲ್ವುಡ್ಗೆ ವಿಕೆಟ್ ಒಪ್ಪಿಸಿದರು. ನಂತರ ಹ್ಯಾಜಲ್ವುಡ್ 8ನೇ ಓವರ್ನಲ್ಲಿ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ (7) ಹಾಗೂ ಜೋಶ್ ಇಂಗ್ಲಿಸ್(14) ವಿಕೆಟ್ ಪಡೆದು ಆರ್ಸಿಬಿಗೆ ಗೆಲುವಿನ ಆಸೆ ಮೂಡಿಸಿದ್ದರು.
ಒಂದು ಹಂತದಲ್ಲಿ ಪಂಜಾಬ್ 53 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಆದರೆ ನೆಹಾಲ್ ವಧೇರಾ ಅದಕ್ಕೆ ಅವಕಾಶ ಕೊಡಲಿಲ್ಲ. ಅವರು 19 ಎಸೆತಗಳಲ್ಲಿ 3 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 33 ರನ್ಗಳಿಸಿ ತಂಡವನ್ನು ಗೆಲುವಿನ ಗಡಿ ದಾಟಿಸಿದರು.
ಇದನ್ನೂ ಓದಿ : ಬೆಳಗಾವಿಯಲ್ಲಿ ತಾಯಿ, ಮಗ ಜೋಡಿ ಕೊಲೆ ಪ್ರಕರಣ – ಪೊಲೀಸರಿಗೆ ಹೆದರಿ ಆರೋಪಿ ನೇಣಿಗೆ ಶರಣು!
