ಬೆಂಗಳೂರು : ಹುಬ್ಬಳ್ಳಿ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ ಪ್ರಕರಣ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಬ್ರಾಹ್ಮಣರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದೀಗ ಈ ವಿಚಾರವಾಗಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಪ್ರತಿಕ್ರಿಯೆ ನೀಡಿದ್ದು, ಜನಿವಾರ ತೆಗೆಸಿದವರನ್ನು ಒದ್ದು ಒಳಗೆ ಕಳಿಸಿ. ಜನಿವಾರ, ಉಡುದಾರ ಎಲ್ಲವೂ ಧಾರ್ಮಿಕ ಸಂಕೇತವಾಗಿದೆ. ಘಟನೆಗೆ ಕಾಂಗ್ರೆಸ್ನ ನಾಸ್ತಿಕವಾದವೇ ಮೂಲ ಕಾರಣ. ಕೃತ್ಯ ಎಸಗಿದವರನ್ನು ಕೂಡಲೇ ಒದ್ದು ಮನೆಗೆ ಕಳಿಸಿ ಎಂದ ಮುತಾಲಿಕ್ ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ 4 ಅಂತಸ್ತಿನ ಕಟ್ಟಡ ಕುಸಿತ – ನಾಲ್ವರು ಸಾವು.. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ!

Author: Btv Kannada
Post Views: 104