ಬೆಂಗಳೂರಲ್ಲಿ ವಿಂಗ್ ಕಮಾಂಡರ್​ ಮೇಲೆ ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ!

ಬೆಂಗಳೂರು : ಕಾರು ಅಡ್ಡಗಟ್ಟಿ ವಿಂಗ್ ಕಮಾಂಡರ್ ಮೇಲೆ ಬೈಕ್‌ ಸವಾರರು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಸಿವಿ ರಾಮನ್ ನಗರದಲ್ಲಿ ನಡೆದಿದೆ. ಕಾರಿನ ಮೇಲಿದ್ದ DRDO ಸಂಸ್ಥೆಯವರ ಅಂತ ಹೇಳಿ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.

ಇಂದು ಬೆಳಗ್ಗೆ ವಿಂಗ್ ಕಮಾಂಡರ್‌ ಶಿಲಾದಿತ್ಯ ಬೋಸ್‌ ಕೋಲ್ಕತ್ತಾಗೆ ಹೋಗಲು ಏರ್‌ಪೋರ್ಟ್‌ಗೆ ತೆರಳುತ್ತಿದ್ದರು. ಅವರ ಪತ್ನಿ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಟಚ್ ಆಗಿದೆ. ಬಳಿಕ ಬೈಕ್ ಸವಾರರು ಕಾರನ್ನು ತಡೆದು, ವಿಂಗ್ ಕಮಾಂಡರ್‌ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ನಾನೊಬ್ಬ ಯೋಧ ಅಂತ ಹೇಳಿದ್ರು ಕೇಳದೇ ಬೋಸ್ ಮೇಲೆ ಗ್ಯಾಂಗ್​ ಮಾರಣಾಂತಿಕ ಹಲ್ಲೆ ಮಾಡಿದೆ. ಈ ಬಗ್ಗೆ ಠಾಣೆಗೆ ದೂರು ನೀಡಿದ್ರೂ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ವಿಂಗ್ ಕಮಾಂಡರ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ಬೋಸ್ ಅಳಲು ತೋಡಿಕೊಂಡಿರುವ ವಿಡಿಯೋ ಹರಿಬಿಟ್ಟಿದ್ದಾರೆ. ಈ ಘಟನೆ ಬೈಯ್ಯಪ್ಪನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ಲವ್ವರ್ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ!

Btv Kannada
Author: Btv Kannada

Read More