ಕೊನೆಗೂ ಕನ್ನಡಪರ ಸಂಘಟನೆಗಳ ಒತ್ತಾಯಕ್ಕೆ ಮಣಿದ ಪೊಲೀಸರು.. ವಿಂಗ್ ಕಮಾಂಡರ್ ಶಿಲಾದಿತ್ಯ ವಿರುದ್ಧ FIR!

ಬೆಂಗಳೂರು : ಕನ್ನಡಿಗನ ಮೇಲೆಯೇ ಹಲ್ಲೆ ಮಾಡಿ ಕನ್ನಡ ಮಾತನಾಡಲಿಲ್ಲ ಅಂತ ಹೊಡೆದಿದ್ದಾರೆ ಎಂದು ಕಥೆ ಕಟ್ಟಿದ್ದ ಐಎಎಫ್ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅಸಲಿ ಬಣ್ಣ ಬಯಲಾಗಿದೆ.

ಹೌದು.. ನಿನ್ನೆ ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಮಾಲ್ ಬಳಿ ವಿಂಗ್ ಕಮಾಂಡರ್‌ ಶಿಲಾದಿತ್ಯ ಬೋಸ್ ಮೇಲೆ ಕನ್ನಡಿಗನಿಂದ ಹಲ್ಲೆ ನಡೆದಿದೆ ಎಂಬ ಸುಳ್ಳು ವಿಚಾರ ಅಂತರಾಷ್ಟ್ರಿಯ ಮಟ್ಟದಲ್ಲಿ ಸುದ್ದಿ ಆಗಿದ್ದು, ಗಲಾಟೆಗೆ ಕನ್ನಡ ಭಾಷೆಯ ವಿಚಾರ ಎನ್ನುವ ಬಣ್ಣ ಹಚ್ಚಲಾಗಿತ್ತು. ಆದ್ರೆ ಇದೀಗ ವಿಂಗ್​ ಕಮಾಂಡರ್​ ಸುಳ್ಳಿನ ಆಟ ಸಿಸಿಟಿವಿಯಲ್ಲಿ ಬಯಲಾಗಿದ್ದು, ಕನ್ನಡಿಗನ ಮೇಲೆಯೇ ಹಲ್ಲೆ ಮಾಡಿ ಸುಳ್ಳು ಆರೋಪ ಮಾಡಿದ ವಿಂಗ್ ಕಮಾಂಡರ್‌ ಶಿಲಾದಿತ್ಯ ಬೋಸ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್​ ವಿರುದ್ಧ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ 109, 115(2), 304, 324, 352 ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಹಲ್ಲೆಗೊಳಗಾದ ವಿಕಾಸ್ ಕುಮಾರ್ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಆತನ ವಾಹನದ ನಂಬರ್ ಸಮೇತ ನೀಡದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಮಾಧ್ಯಮಗಳಲ್ಲಿ ಕನ್ನಡಿಗರು ಗೂಂಡಾಗಳೆಂದು ಬಿಂಬಿಸಲು ಯತ್ನಿಸಿದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಸಿಡಿದೆದ್ದ ಕನ್ನಡಿಗರು, ನಿನ್ನೆ ರಾತ್ರಿ ಪೂರ್ತಿ ಬೈಯ್ಯಪ್ಪನಹಳ್ಳಿ ಠಾಣೆ ಮುಂದೆ ಕನ್ನಡ ಸಂಘಟನೆಗಳು ಪ್ರೊಟೆಸ್ಟ್ ನಡೆಸಿವೆ.

ಹಲ್ಲೆಗೊಳಗಾದ ಕನ್ನಡಿಗ ವಿಕಾಸ್​ಗೆ ಬೆನ್ನೆಲುಬಾಗಿ ನಿಂತು ರಾತ್ರಿ ಇಡೀ ಕನ್ನಡಿಗರು ಪ್ರತಿಭಟನೆ ಮಾಡಿದ್ದಾರೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೇ ರಕ್ಷಣೆ ಇಲ್ವಾ? ವಿಂಗ್ ಕಮಾಂಡರ್ ಆದ್ರೂ ಅಷ್ಟೇ, ಮೊದ್ಲು ಅರೆಸ್ಟ್ ಮಾಡಿ ಎಂದು ರೂಪೇಶ್ ರಾಜಣ್ಣ ನೇತೃತ್ವದಲ್ಲಿ ಹೋರಾಟಗಾರರು FIR ದಾಖಲಿಸಲು ಹಠ ಹಿಡಿದಿದ್ದರು. ಇದೀಗ ಕೊನೆಗೂ ಕನ್ನಡಪರ ಸಂಘಟನೆಗಳ ಒತ್ತಾಯಕ್ಕೆ ಮಣಿದು ಪೊಲೀಸರು ವಿಂಗ್​ ಕಮಾಂಡರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದು ಕನ್ನಡಿಗರ ಸಿಕ್ಕ ದೊಡ್ಡ ಗೆಲುವು. ಆದಷ್ಟು ಬೇಗ ಆರೋಪಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ನನ್ನ ಬಂಧಿಸಿ ಜೈಲಿಗಟ್ಟುವ ಕೆಲಸವಾಗಬೇಕಷ್ಟೇ.

ಪ್ರಕರಣ ಏನು? ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಮಾಲ್ ಬಳಿ ಕಾರಿಗೆ ಬೈಕ್ ಹಿಂದಿನಿಂದ ಟಚ್ ಆಗಿದ್ದಕ್ಕೆ ಗಲಾಟೆಯಾಗಿದೆ ಎನ್ನಲಾಗಿತ್ತು. ಪ್ರಕರಣ ಸಂಬಂಧ ವಿಂಗ್ ಕಮಾಂಡರ್ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವೀಡಿಯೋದಲ್ಲಿ, ‘ಬೈಕ್ ಸವಾರ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಕನ್ನಡ ಮಾತನಾಡಿಲ್ಲ ಎಂದು ಹಲ್ಲೆ ಮಾಡಿದ. ನನ್ನ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ. ಈ ವೇಳೆ ನನ್ನ ಮೇಲೆ ಹಲ್ಲೆ ಮಾಡಿದ. ಸ್ಥಳೀಯರು ಯಾರೂ ಕೂಡ ಸಹಾಯಕ್ಕೆ ಬರಲಿಲ್ಲ’ ಎಂದು ವಿಂಗ್ ಕಮಾಂಡರ್ ಸುಳ್ಳು ಆರೋಪ ಮಾಡಿದ್ದರು. ತಲೆಗೆ ಮತ್ತು ಮೂಗಿನ ಭಾಗಕ್ಕೆ ಪೆಟ್ಟಾಗಿದೆ ಎಂದು ಬ್ಯಾಂಡೇಜ್ ಹಾಕಿಸಿದ್ದರು. ಆದರೆ, ಹಲ್ಲೆಗೆ ಸಂಬಂಧಿಸಿದ ಸಿಸಿಟಿವಿ ವೀಡಿಯೋ ಎಲ್ಲೆಡೆ ವೈರಲ್​ ಆಗಿದ್ದು, ವಿಂಗ್ ಕಮಾಂಡರ್ ಅಸಲಿಯತ್ತು ಬಯಲಾಗಿದೆ. ವೀಡಿಯೋದಲ್ಲಿ ಕನ್ನಡಿಗ ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಮಾರಣಾಂತಿಕ ಹಲ್ಲೆ ನಡೆಸಿರುವುದು ಕಂಡುಬಂದಿದೆ.

ಇದನ್ನೂ ಓದಿ : ಹಲ್ಲೆ ಕೇಸ್​ಗೆ ಬಿಗ್​ ಟ್ವಿಸ್ಟ್ – ವಿಂಗ್ ಕಮಾಂಡರ್​ನ ಅಸಲಿ ಬಣ್ಣ ಬಯಲು.. ಸಿಡಿದೆದ್ದ ಕನ್ನಡಿಗರು!

Btv Kannada
Author: Btv Kannada

Read More