ಬೆಂಗಳೂರು : ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕೊಲೆ ಯತ್ನ ಕೇಸ್ಗೆ ಸಂಬಧಿಸಿದಂತೆ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಅನುರಾಧ ರೈ ಅವರು ವಿದೇಶದಿಂದಲೇ ಅರ್ಜಿ ಸಲ್ಲಿಸದ್ದರು. ಇದೀಗ ಅನುರಾಧ ಪರ ವಕೀಲರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಹೊರಡಿಸಿದೆ. ಈ ಮೂಲಕ ಮುತ್ತಪ್ಪ ರೈ 2 ನೇ ಪತ್ನಿ ಅನುರಾಧಗೆ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.
ವಿನಾಕಾರಣ ಪ್ರಕರಣದಲ್ಲಿ ಅನುರಾಧ ಹೆಸರು ತಂದಿದ್ದಾರೆ. ಆಸ್ತಿ ವಿವಾದ 6 ತಿಂಗಳ ಹಿಂದೆಯೇ ಇತ್ಯರ್ಥವಾಗಿದೆ. ಏ.14ರಂದೇ ಅನುರಾಧ ಪುತ್ರಿಯೊಂದಿಗೆ ಯೂರೋಪ್ಗೆ ತೆರಳಿದ್ದಾರೆ.ಕೊಲೆ ಯತ್ನ ಕೇಸ್ಗೂ ಅವರಿಗೂ ಸಂಬಂಧವಿಲ್ಲವೆಂದು ಅನುರಾಧ ಪರ ವಕೀಲ ವೆಂಕಟೇಶ್ ಅರಬಟ್ಟಿಯವರು ವಾದ ಮಂಡಿಸಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾ. ಹೇಮಂತ್ ಚಂದನ ಗೌಡರ್ ಅವರಿದ್ದ ಪೀಠ, ಅನುರಾಧ ರೈ ಅವರನ್ನು ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದೆ.
ಇದನ್ನೂ ಓದಿ : ರೌಡಿ ಅಧಿಕಾರಿ ಶಿಲಾದಿತ್ಯ ವಿರುದ್ಧ ಭುಗಿಲೆದ್ದ ಆಕ್ರೋಶ – ಕನ್ನಡಿಗರ ಹೆಸರಿಗೆ ಮಸಿ ಬಳಿದ ವಿಂಗ್ ಕಮಾಂಡರ್ ಅರೆಸ್ಟ್ ಯಾವಾಗ?
