ಒಲವು ಸಿನಿಮಾ ಲಾಂಛನದಲ್ಲಿ ಒಲವಿನ ಗೆಳೆಯರು ಒಂದಷ್ಟು ಜನ ಸೇರಿ ಒಲವಿನಿಂದ ನಿರ್ಮಾಣ ಮಾಡಿರುವ ಹಾಗೂ ಪ್ರವೀಣ್ ಕುಮಾರ್ ಜಿ ಬರವಣಿಗೆ ಹಾಗೂ ನಿರ್ದೇಶನದ “ಅಮರ ಪ್ರೇಮಿ ಅರುಣ್” ಚಿತ್ರ ಏಪ್ರಿಲ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಗಣಿ ನಾಡು ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ “ಅಮರ ಪ್ರೇಮಿ ಅರುಣ್” ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ. ಧರ್ಮಣ್ಣ ಕಡೂರು, ಕ್ರಿತಿ ಭಟ್, ಮಹೇಶ್ ಬಂಗ್, ಅರ್ಚನಾ ಕೊಟ್ಟಿಗೆ, ರಂಜಿತಾ ಪುಟ್ಟಸ್ವಾಮಿ, ಮಂಜಮ್ಮ ಜೋಗತಿ, ರಾಧ ರಾಮಚಂದ್ರ, ಬಲ ರಾಜವಾಡಿ ಹೀಗೆ ಅನುಭವಿ ಕಲಾವಿದರ ದೊಡ್ಡ ದಂಡೆ ಈ ಚಿತ್ರದಲ್ಲಿದೆ. ಬಳ್ಳಾರಿ ಆಸುಪಾಸಿನಲ್ಲೇ ಚಿತ್ರೀಕರಣ ನಡೆದಿರುವ ಈ ಚಿತ್ರದ ಸಂಭಾಷಣೆ ಕೂಡ ಅಲ್ಲಿನ ಸೊಗಡಿನಲ್ಲೇ ಇದೆ.
ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ಪ್ರವೀಣ್ ಕುಮಾರ್ ಅವರು “ಅಮರ ಪ್ರೇಮಿ ಅರುಣ್” ಚಿತ್ರದ ಹಾಡುಗಳನ್ನು ಬರೆದಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ನೀಡಿದ್ದಾರೆ. ಡಿ-ಬಿಟ್ಸ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ.
ಪ್ರವೀಣ್ ಎಸ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನವಿರುವ “ಅಮರ ಪ್ರೇಮಿ ಅರುಣ್” ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮಂಡ್ಯ ಮಂಜು ಕಾರ್ಯ ನಿರ್ವಹಿಸಿದ್ದಾರೆ. ಏಪ್ರಿಲ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಕಾತರರಾಗಿದ್ದಾರೆ.
ಇದನ್ನೂ ಓದಿ : ಯಾವುದೇ ಕ್ಷಣ BBMP ಮುಖ್ಯ ಕಮಿಷನರ್ ಟ್ರಾನ್ಸ್ಫರ್ – ನಗರಾಭಿವೃದ್ದಿ ಇಲಾಖೆಗೆ ತುಷಾರ್ ಗಿರಿನಾಥ್ ವರ್ಗಾವಣೆ ಸಾಧ್ಯತೆ!
