ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್​ – ಕಾಂಗ್ರೆಸ್ ಮುಖಂಡ​ ತನ್ನೀರ ಮೈನಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಬೆಂಗಳೂರು : ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೂ ಆಗಿರುವ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ತನ್ನೀರ ಮೈನಾ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಸಂಬಂಧ ನಿರೀಕ್ಷಣಾ ಜಾಮೀನಿಗೆ ತನ್ನೀರ ಮೈನಾ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ತನ್ನೀರ ಮೈನಾ ಅರ್ಜಿ ವಿಚಾರಣೆ ನಡೆಸಿ ಮೆಯೋಹಾಲ್ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶಿಸಿದೆ. ಈ ಮೂಲಕ ಇದೀಗ ಕಾಂಗ್ರೆಸ್ ಮುಖಂಡ ತನ್ನೀರ ಮೈನಾಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.

ಇದನ್ನೂ ಓದಿ : ಬೆಂಗಳೂರು : ಚಲಿಸುತ್ತಿದ್ದ ಆಟೋದಿಂದ ಕಸ ಎಸೆದಿದ್ದನ್ನು ಪ್ರಶ್ನಿಸಿದ ಪ್ರೊಫೆಸರ್ ಮೇಲೆ ಹಲ್ಲೆ – ದೂರು ದಾಖಲು!

Btv Kannada
Author: Btv Kannada

Read More

Read More