ನಮಗೆ ರಾಜಕಾರಣ ಮುಖ್ಯವಲ್ಲ, ಜನರ ಸೇವೆಯೇ ಮುಖ್ಯ – ಡಿಸಿಎಂ ಶಿವಕುಮಾರ್

ಚಾಮರಾಜನಗರ : ಬೆಂಗಳೂರು ಗಡಿ ಜಿಲ್ಲೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಅಲ್ಲಿಗೆ ತಲುಪಿದ್ದು, ಮಲೆ ಮಹದೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ದಿ ಪಡಿಸುವುದೇ ನಮ್ಮ ಸರ್ಕಾರದ ಆಧ್ಯ ಕರ್ತವ್ಯವಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಮಲೆ ಮಹದೇಶ್ವರ ಬೆಟ್ಟ ಒಂದು ಪ್ರಸಿದ್ದ ಧಾರ್ಮಿಕ ಕ್ಷೇತ್ರವಾಗಿದ್ದು, ವಿಶೇಷ ದಿನಗಳಲ್ಲಿ ಇಲ್ಲಿಗೆ ಲಕ್ಷಾಂತರ ಮಂದಿ ಭಕ್ತರು ಆಗಮಿಸುತ್ತಾರೆ. ಭಕ್ತಾದಿಗಳಿಗೆ ಮೂಲಸೌಕರ್ಯ ಕೊಡುವ ಉದ್ದೇಶದಿಂದ ನಮ್ಮ ಸರ್ಕಾರದಿಂದ‌ ಮಹದೇಶ್ವರ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ್ದೇವೆ.

ನಮಗೆ ರಾಜಕಾರಣ ಮುಖ್ಯವಲ್ಲ. ಜನರ ಸೇವೆ ಮಾಡುವುದು ನಮ್ಮ‌ ಸರ್ಕಾರದ ಆದ್ಯ ಕರ್ತವ್ಯ. ಈ ಭಾಗದ ಜನರ ನಿರೀಕ್ಷೆಗಳನ್ನು ಚರ್ಚಿಸಿ ಪರಿಹರಿಸಲು ಸಚಿವ ಸಂಪುಟ ಆಯೋಜಿಸಿದ್ದೇವೆ. ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದಿಂದ ಕ್ಷೇತ್ರಕ್ಕೆ ಬೇಕಾದ ಮೂಲಸೌಕರ್ಯಗಳನ್ನು ಒದಗಿಸುವ ಕುರಿತಯ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಇನ್ನು ಇಂದಿನ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ  ಮೈಸೂರು ಭಾಗದ ಅಭಿವೃದ್ಧಿ ಯೋಜನೆಗಳು ಮಾತ್ರವಲ್ಲದೆ ಬರೋಬ್ಬರಿ 73 ವಿಷಯಗಳನ್ನು ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಸೇರಿವೆ.​ ಬಹುನಿರೀಕ್ಷಿತ ಸಚಿವ ಸಂಪುಟ ಸಭೆಯಲ್ಲಿ ಚಾಮರಾಜನಗರ, ಮಂಡ್ಯ, ಮೈಸೂರು ಭಾಗದ ಹಲವು ಅಭಿವೃದ್ಧಿ ಯೋಜನಾ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ.

ಇದನ್ನೂ ಓದಿ : I Kill U.. ಐಸಿಸ್ ಉಗ್ರರಿಂದ ಟೀಮ್‌ ಇಂಡಿಯಾ ಕೋಚ್ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ!

Btv Kannada
Author: Btv Kannada

Read More

Read More