ಮೈಸೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಿದ್ದ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಕೃಷ್ಣ ರಾಜ ಸಾಗರ (KRS)ನಲ್ಲಿ ವಿಜೃಂಭಣೆಯ ಕಾವೇರಿ ಆರತಿಗೆ ಸಿದ್ಧತೆ ನಡೆಸಿದೆ. ಕೃಷ್ಣ ರಾಜಸಾಗರದಲ್ಲಿ ಕಾವೇರಿ ಆರತಿ ನಡೆಸಲು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ರಚಿಸಿರುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನ ಸಮಿತಿ ಯನ್ನು ರಚಿಸಿದೆ. ಅಗತ್ಯ ಅನುದಾನ ಸಹ ಒದಗಿಸಿದೆ.
ಈಗಾಗಲೇ ‘ಗಂಗಾ ಆರತಿ’ ಮಾದರಿಯಲ್ಲಿ ‘ಕಾವೇರಿ ಆರತಿ’ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಈ ಹಿನ್ನೆಲೆ ಇಂದು KRS ಡ್ಯಾಂನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್ ಅವರು, ‘ಕಾವೇರಿ ಆರತಿಗೆ ಸಿದ್ಧಗೊಳ್ಳುತ್ತಿದೆ ನಮ್ಮ ಕೆ.ಆರ್.ಎಸ್! ಕೃಷ್ಣರಾಜಸಾಗರ ಆವರಣದಲ್ಲಿ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಏರ್ಪಡಿಸಲು ನಿರ್ಧರಿಸಿದ ಹಿನ್ನಲೆಯಲ್ಲಿ ಸ್ಥಳ ವೀಕ್ಷಣೆ ಮಾಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ವಿಶ್ವವಿಖ್ಯಾತ ದಸರಾ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡುವ ನಿಟ್ಟಿನಲ್ಲಿ ರಾಜ್ಯದ ಜೀವನದಿ ಕಾವೇರಿ ಮಾತೆಗೆ ನಮನ ಹಾಗೂ ಪೂಜೆ ಸಲ್ಲಿಸಲು ‘ಕಾವೇರಿ ಆರತಿ’ಯನ್ನು ಆಯೋಜಿಸಲಾಗುತ್ತದೆ’ ಎಂದು ಹೇಳೀದ್ದಾರೆ.
92 ಕೋಟಿ ಅನುದಾನ : ಕರ್ನಾಟಕ ಸರ್ಕಾರ ಕೆಆರ್ಎಸ್ನಲ್ಲಿ ವಿಜೃಂಭಣೆಯ ಕಾವೇರಿ ಆರತಿಗೆ ಮುನ್ನಡಿ ಬರೆದಿದ್ದು, ಅನುಷ್ಠಾನ ಸಮಿತಿ ರಚನೆ ಮಾಡಿ 92 ಕೋಟಿ ರೂಪಾಯಿಗಳ ಅನುದಾನ ಸಹ ನೀಡಿದೆ.
ಇದನ್ನೂ ಓದಿ : ಜನಿವಾರ ತೆಗೆಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ – ಸರ್ಕಾರದ ನಡೆ ಖಂಡಿಸಿ ಮಾನವ ಹಕ್ಕುಗಳ ಆಯೋಗಕ್ಕೆ ಆರ್. ಅಶೋಕ್ ದೂರು!
