ಚಿತ್ರದುರ್ಗ : ಪಕ್ಕದ ಮನೆ ಗೆಳತಿ ಸೈಕಲ್ ಕೊಡಲು ನಿರಾಕರಿಸಿದ್ದಕ್ಕೆ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ನಗರದಲ್ಲಿ ನಡೆದಿದೆ. ಗೋಪಾಲ್ ಮತ್ತು ರುದ್ರಮ್ಮ ದಂಪತಿಯ ಪುತ್ರಿ ಸ್ಪಂದನ (11) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಸ್ಪಂದನ ನಿತ್ಯವೂ ತನ್ನ ಸ್ನೇಹಿತೆಯೊಂದಿಗೆ ಸೈಕಲ್ ಓಡಿಸುತ್ತಿದ್ದಳು. ಘಟನೆಯ ದಿನ, ಸೈಕಲ್ ಕೊಡಲು ನಿರಾಕರಿಸಿದ್ದರಿಂದ ಮನನೊಂದು ಸ್ಪಂದನ ಮನೆಯ ಕೊಠಡಿಯೊಳಗೆ ಹೋಗಿ ಬಾಗಿಲು ಲಾಕ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ತನಿಖೆ ಮುಂದುವರೆಯಲಿದೆ.
ಇದನ್ನೂ ಓದಿ : ಶೋಕಾಚರಣೆ ಬಿಟ್ಟು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಯಾವುದೇ ಕ್ಷಣ ಸಸ್ಪೆಂಡ್?

Author: Btv Kannada
Post Views: 178