ಕೋಲಾರ : ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಕೋಲಾರ ತಾಲೂಕಿನ ನರಸಾಪುರ ಬಳಿಯ ಬೆಳ್ಳೂರು ಬ್ರಿಡ್ಜ್ ನಡೆದಿದೆ. ಬೆಂಗಳೂರಿನ ಆರ್.ಟಿ ನಗರದ ನಿವಾಸಿ ಅಫ್ರೋಜ್ ಮೃತ ದುರ್ದೈವಿ.
ಬೆಳ್ಳೂರು ಗೇಟ್ ಬಳಿಯ ಚೆನ್ನೈ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 76ರಲ್ಲಿ ಇಂಡಿಕಾ, ಫಾರ್ಚುನರ್ ಹಾಗೂ ಪೊಲೋ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಈ ವೇಳೆ ಪೊಲೋ ಕಾರಿನಲ್ಲಿದ್ದ ಬೆಂಗಳೂರು ಆರ್.ಟಿ ನಗರದ ನಿವಾಸಿ ಅಫ್ರೂಜ್ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಅಫ್ರೂಜ್ ಮುಳಬಾಗಿಲಿನ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ತೆರಳಿದ್ದರು. ಇನ್ನೂ ಘಟನೆಯಲ್ಲಿ ಗಾಯಗೊಂಡ ಐವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ವೇಮಗಲ್ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಯಲು ಸೂಚನೆ – ಆದೇಶ ಕೈಬಿಡಲು ವಿಶ್ವ ಹಿಂದು ಪರಿಷತ್ ಆಗ್ರಹ!
