ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೆಚ್ಚುವರಿ ಹೊಣೆ ನೀಡಿದೆ.

BBMP ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ತುಷಾರ್ ಗಿರಿನಾಥ್ ಅವರು ಕಳೆದ ಎರಡೂವರೆ ವರ್ಷಗಳಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುಷಾರ್ ಗಿರಿನಾಥ್ ಅವರು ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಮುಖ್ಯಸ್ಥರಾಗಿದ್ದರು. ನಗರ ಆಡಳಿತದ ಬಗ್ಗೆ ಅವರ ಆಳವಾದ ತಿಳುವಳಿಕೆ, ನಗರಾಭಿವೃದ್ಧಿ ಇಲಾಖೆ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸುವ ಆಶಯ ಜನರಲ್ಲಿದೆ.
ಇದನ್ನೂ ಓದಿ : ಆಸ್ತಿ ತೆರಿಗೆ ಮೇಲೆ 5% ರಿಯಾಯಿತಿ.. ಡೆಡ್ಲೈನ್ ವಿಸ್ತರಿಸುವಂತೆ BBMPಗೆ ಆಸ್ತಿ ಮಾಲೀಕರ ಒತ್ತಾಯ!
