ಬೆಂಗಳೂರು : ಸ್ಯಾಂಡಲ್ವುಡ್ ಸ್ಟಾರ್ಸ್ ಶೂಟಿಂಗ್ಗೆ ಸ್ವಲ್ಪ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ‘ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೀಸನ್- 11’ಕ್ಕೆ ದಿನಗಣನೆ ಶುರುವಾಗಿದ್ದು, ಇದೇ ಫೆ.8ರಿಂದ (ಸಿಸಿಎಲ್)11ನೇ ಸೀಸನ್ ಶುರುವಾಗುತ್ತಿದೆ. ಹಾಗಾಗಿ ಈ ಟೂರ್ನಿಯ ಉದ್ಘಾಟನಾ ಸಮಾರಂಭಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಇಂದು ನಟ ಸುದೀಪ್ ಆಹ್ವಾನಿಸಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ ಕಿಚ್ಚ ಸುದೀಪ್ ಅವರು ಇಂದು ಭೇಟಿ ನೀಡಿ, ಟೂರ್ನಿಯ ಉದ್ಘಾಟನಾ ಸಮಾರಂಭಕ್ಕೆ ಪ್ರೀತಿಯ ಕರೆಯೋಲೆ ನೀಡಿದ್ದಾರೆ. ಈ ವೇಳೆ ಸುದೀಪ್ಗೆ ಡೈರೆಕ್ಟರ್ ಅನೂಪ್ ಭಂಡಾರಿ ಸಾಥ್ ನೀಡಿದ್ದಾರೆ.

ಫೆಬ್ರವರಿ 8ರಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಸೀಸನ್- 11ರ ಉದ್ಘಾಟನಾ ಕಾರ್ಯಕ್ರಮ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಉದ್ಯಮಿ ಅಶೋಕ್ ಖೇಣಿಯವರು ‘ಕರ್ನಾಟಕ ಬುಲ್ಡೋಜರ್ಸ್’ ತಂಡದ ಮಾಲೀಕರಾಗಿದ್ದು, ಪ್ರತಿಬಾರಿಯಂತೆ ನಟ ಸುದೀಪ್ ಅವರ ನೇತೃತ್ವದಲ್ಲಿಯೇ ತಂಡ ಮುನ್ನಡೆಯಲಿದೆ.

ಕಳೆದ ಬಾರಿ ರನ್ನರ್ ಅಪ್ ಆಗಿದ್ದ ‘ಕರ್ನಾಟಕ ಬುಲ್ಡೋಜರ್ಸ್’ ಈ ಬಾರಿ ಟ್ರೋಫಿ ಗೆಲ್ಲುವ ನಿರೀಕ್ಷೆಯಿಂದ ಅಖಾಡಕ್ಕೆ ಎಂಟ್ರಿ ಕೊಡುತ್ತಿದೆ. ಮೊದಲ ಪಂದ್ಯ ಬೆಂಗಳೂರಲ್ಲಿ ಫೆ.8ರಂದೇ ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಬೆಂಗಾಲ್ ಟೈಗರ್ಸ್ ಸೆಣಸಾಡಲಿವೆ. ಇದಾದ ಬಳಿಕ 2ನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ಪಂದ್ಯವಾಡಲಿವೆ.
ಈ ಬಾರಿ ಸಿಸಿಎಲ್ ಟೂರ್ನಿಯಲ್ಲಿ ಒಟ್ಟು 7 ತಂಡಗಳು ಆಡಲಿದೆ. ಕರ್ನಾಟಕ ಬುಲ್ಡೋಜರ್ಸ್, ಚೆನ್ನೈ ರೈನೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ದಿ ಶೇರ್, ಮುಂಬೈ ಹೀರೋಸ್, ಭೋಜ್ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್ ಸೇರಿದಂತೆ 7 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
ಇದನ್ನೂ ಓದಿ : http://‘ಕೆಂಪು’ ಅಪ್ಸರೆಯಾದ ಬಿಗ್ ಬಾಸ್ ನಮ್ರತಾ.. ‘ಬೆಂಗಾಲಿ’ ಬೆಡಗಿ ವಯ್ಯಾರಕ್ಕೆ ಫ್ಯಾನ್ಸ್ ಬೋಲ್ಡ್
