ಮಂಡ್ಯದ ವಿ.ಸಿ. ನಾಲೆಯಲ್ಲಿ ಮತ್ತೊಂದು ದುರಂತ – ಪತ್ತೆಯಾದ ಕಾರಿನಲ್ಲಿತ್ತು ಮೂರು ಶವ.. ಅವಘಡವೋ, ಆತ್ಮಹತ್ಯೆಯೋ?

ಮಂಡ್ಯ : ವಿ.ಸಿ. ನಾಲೆ ಮಂಡ್ಯ ಜಿಲ್ಲೆಯ ರೈತರಿಗೆ ಕಾವೇರಿಯನ್ನ ತಲುಪಿಸುವ ಕಾಲುವೆ. ಆದರೆ ಇದೇ ನಾಲೆ ಈಗ ಮೃತ್ಯು ನಾಲೆಯಾಗಿ ಬದಲಾಗಿದೆ. ಸಾಲು ಸಾಲು ದುರಂತಗಳು ಸಂಭವಿಸುತ್ತಿವೆ. ಕಾರು, ಬಸ್ ಸೇರಿದಂತೆ ಬೇರೆ ಬೇರೆ ವಾಹನಗಳು ನಾಲೆಗೆ ಪಲ್ಟಿಯಾಗಿ ಸಾಕಷ್ಟು ಜನರು ಜೀವ ಕಳೆದುಕೊಂಡಿದ್ದಾರೆ. ಹಾಗಾಗಿ ಸಕ್ಕರೆ ನಾಡಿನ ರೈತರ ಜಲದ ಸೆಲೆಯೇ ಈಗ ಸಾವಿನ ನಾಲೆಯಾಗಿದೆ.

ಹೌದು.. ವಿ.ಸಿ. ನಾಲೆಯಲ್ಲಿ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಕೆ.ಆರ್.ಎಸ್ ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಗ್ರಾಮದ ಸಮೀಪ ವಿಶ್ವೇಶ್ವರಯ್ಯ ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಅದರಲ್ಲಿ ಮೂರು ಶವಗಳು ಪತ್ತೆಯಾಗಿವೆ. ಮೃತಪಟ್ಟವರು ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಅವರ ಮಕ್ಕಳಾದ ಅತ್ (8) ಮತ್ತು ಅಕ್ಷತಾ (3) ಎಂದು ಗುರುತಿಸಲಾಗಿದೆ.

ಏ. 16ರಂದು ಕುಮಾರಸ್ವಾಮಿ ಮಕ್ಕಳ ಜತೆ ತಮ್ಮ ಕಾರಿನಲ್ಲಿ ಬೆಂಗಳೂರಿನಿಂದ ಕೆ. ಆ‌ರ್. ನಗರಕ್ಕೆ ಹೊರಟಿದ್ದರು. ಬಳಿಕ ಅವರ ಸುಳಿವೇ ಇರಲಿಲ್ಲ. ಏ.19 ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ವಿ.ಸಿ ನಾಲೆಯಲ್ಲಿ ನೀರು ಕಡಿಮೆಯಾಗಿದ್ದರಿಮದ ಕಾರು ಕಾಣಿಸಿಕೊಂಡಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕೆ.ಆರ್.ಎಸ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಕಾರು ಮತ್ತು ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಕಾರು ನಾಲೆಗೆ ಉರುಳಲು ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅವಘಡವೋ, ಆತ್ಮಹತ್ಯೆಯೋ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಭೂಗತ ಪಾತಕಿ ಬನ್ನಂಜೆ ರಾಜನಿಗೆ ಪೆರೋಲ್ – ತಂದೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಹೈಕೋರ್ಟ್ ಅನುಮತಿ!

Btv Kannada
Author: Btv Kannada

Read More

Read More