ಮೂವರು ಅಡಿಷನಲ್ ಎಸ್​ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಬೆಂಗಳೂರು : ಕರ್ನಾಟಕ ಸರ್ಕಾರ ಪೊಲೀಸ್‌ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಿದ್ದು, ಮೂವರು ಅಡಿಷನಲ್ ಎಸ್​ಪಿಗಳನ್ನು ದಿಢೀರ್​ ವರ್ಗಾವಣೆ ಮಾಡಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಬೆಂಗಳೂರು CID ಪೊಲೀಸ್ ಅಧೀಕ್ಷಕರಾದ ಪುರುಷೋತ್ತಮ್ ಎಂ.ಎಲ್ ಅವರನ್ನು ತುಮಕೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಹುದ್ದೆಗೆ, ಬೆಂಗಳೂರು ರಾಜ್ಯ ಗುಪ್ತವಾರ್ತೆ ಉಪ ನಿರ್ದೇಶಕರಾದ ಬಿ. ಜಗನ್ನಾಥ್ ರೈ ಅವರನ್ನು ಚಿಕ್ಕಬಳ್ಳಾಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.

ಇನ್ನು ಬೆಂಗಳೂರು ಕರ್ನಾಟಕ ರಾಜ್ಯ ಗುಪ್ತಚರ ಇಲಾಖೆ ಉಪ ನಿರ್ದೇಶಕರಾದ ಡಾ. ಹೆಚ್​. ಎನ್ ವೆಂಕಟೇಶ್ ಪ್ರಸನ್ನ ಅವನ್ನು ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು- 1 ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ.

ಇದನ್ನೂ ಓದಿ : ಜೂನಿಯರ್‌ NTR, ಪ್ರಶಾಂತ್‌ ನೀಲ್‌ ಕಾಂಬಿನೇಷನ್​​ನ ಆಕ್ಷನ್‌ ಪ್ಯಾಕ್ಡ್‌ ಸಿನಿಮಾ ಮುಂದಿನ ವರ್ಷ ಜೂ.25ಕ್ಕೆ ರಿಲೀಸ್‌!

Btv Kannada
Author: Btv Kannada

Read More