ಬೆಂಗಳೂರು : ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಮೂವರು ಅಡಿಷನಲ್ ಎಸ್ಪಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಬೆಂಗಳೂರು CID ಪೊಲೀಸ್ ಅಧೀಕ್ಷಕರಾದ ಪುರುಷೋತ್ತಮ್ ಎಂ.ಎಲ್ ಅವರನ್ನು ತುಮಕೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಹುದ್ದೆಗೆ, ಬೆಂಗಳೂರು ರಾಜ್ಯ ಗುಪ್ತವಾರ್ತೆ ಉಪ ನಿರ್ದೇಶಕರಾದ ಬಿ. ಜಗನ್ನಾಥ್ ರೈ ಅವರನ್ನು ಚಿಕ್ಕಬಳ್ಳಾಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.
ಇನ್ನು ಬೆಂಗಳೂರು ಕರ್ನಾಟಕ ರಾಜ್ಯ ಗುಪ್ತಚರ ಇಲಾಖೆ ಉಪ ನಿರ್ದೇಶಕರಾದ ಡಾ. ಹೆಚ್. ಎನ್ ವೆಂಕಟೇಶ್ ಪ್ರಸನ್ನ ಅವನ್ನು ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು- 1 ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ.
ಇದನ್ನೂ ಓದಿ : ಜೂನಿಯರ್ NTR, ಪ್ರಶಾಂತ್ ನೀಲ್ ಕಾಂಬಿನೇಷನ್ನ ಆಕ್ಷನ್ ಪ್ಯಾಕ್ಡ್ ಸಿನಿಮಾ ಮುಂದಿನ ವರ್ಷ ಜೂ.25ಕ್ಕೆ ರಿಲೀಸ್!

Author: Btv Kannada
Post Views: 230