ಟಾರ್ಗೆಟ್, ಟೈಂ ನೀವೇ ನಿರ್ಧರಿಸಿ – ಉಗ್ರರನ್ನು ಹೊಡೆದುರುಳಿಸಲು ಸೇನೆಗೆ ಪರಮಾಧಿಕಾರ ಕೊಟ್ಟ ಪ್ರಧಾನಿ ಮೋದಿ!

ದೆಹಲಿ : ಪಹಲ್ಗಾಮ್​ನಲ್ಲಿ ಅಟ್ಟಹಾಸ ಮೆರೆದ ಉಗ್ರರ​ ವಿರುದ್ಧ ಪ್ರತೀಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಿನ್ನೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ್ ಮಾರ್ಗ್‌ನ ನಿವಾಸದಲ್ಲಿ ನಿನ್ನೆ ಉನ್ನತ‌ ಮಟ್ಟದ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್, ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಭೂಸೇನೆ, ನೌಕಾ ಸೇನೆ ಮತ್ತು ವಾಯುಸೇನೆ ಮುಖ್ಯಸ್ಥರು ಭಾಗಿಯಾಗಿದ್ದರು.

ಸಭೆಯಲ್ಲಿ ಪ್ರಮುಖವಾಗಿ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಯಾವ ರೀತಿ ಕಾರ್ಯಾಚರಣೆ ಮಾಡಬೇಕು ಅನ್ನೋದರ ಬಗ್ಗೆ ಚರ್ಚಿಸಲಾಯಿತು. ಸುಮಾರು 2 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ ಮೂರು ಸೇನೆಗಳ ಮುಖ್ಯಸ್ಥರು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್ ಸಲಹೆಗಳನ್ನ ನೀಡಿದರು. ಕೊನೆಗೆ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ನಮಗೆ ಸೇನೆ ಮೇಲೆ ಪೂರ್ಣ ಪ್ರಮಾಣದಲ್ಲಿ ನಂಬಿಕೆ ಇದೆ. ಉಗ್ರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಮೋದಿ ತಿಳಿಸಿದ್ದಾರೆ. ಆಪರೇಷನ್​ ಆಕ್ರಮಣ್‌ನಲ್ಲಿ ಮೂರು ಸೇನೆಗೆ ಭಾರತ ಸರ್ಕಾರದಿಂದ ಮುಕ್ತ ಅವಕಾಶ ನೀಡಲಾಗಿದೆ. ಸಮಯ, ಸ್ಥಳ.. ನಿಮ್ಮ ವಿವೇಚನೆಗೇ ಬಿಟ್ಟಿದ್ದು. ನೀವೇ ನಿರ್ಧಾರ ಮಾಡಿ ಎಂದು ಸೇನೆಗಳಿಗೆ ಮುಕ್ತ ಸ್ವಾತಂತ್ರ್ಯವನ್ನು ಭಾರತ ಸರ್ಕಾರ ನೀಡಿದೆ ಎಂದು ತಿಳಿದುಬಂದಿದೆ.

ಮೂರು ಸೇನೆಗಳಿಗೆ ಮುಕ್ತ ಸ್ವಾತಂತ್ರ್ಯ

  • ಆಪರೇಷನ್​ ಆಕ್ರಮಣ್ ನಡೆಸಲು ಸೇನೆಗೆ ಮುಕ್ತ ಅವಕಾಶ
  • ನಮಗೆ ಸೇನೆ ಮೇಲೆ ಪೂರ್ಣ ಪ್ರಮಾಣದಲ್ಲಿ ನಂಬಿಕೆ ಇದೆ
  • ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳಲು ಪ್ರಧಾನಿ ಮೋದಿ ಆದೇಶ
  • ಸಮಯ, ಸ್ಥಳ ನೀವೇ ನಿರ್ಧಾರ ಮಾಡಿ.. ಪ್ರಧಾನಿ ಸೂಚನೆ

ಇದನ್ನೂ ಓದಿ : 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಿ – ಸಿಎಂ ಸಿದ್ದರಾಮಯ್ಯ, ಸ್ಪೀಕರ್​ ಖಾದರ್​ಗೆ ರಾಜ್ಯಪಾಲರ ಪತ್ರ!

Btv Kannada
Author: Btv Kannada

Read More

Read More