ಧಾರವಾಡ : ಮನೆ ಮುಂದೆ ಕೂತಿದ್ದ ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆ – ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

ಧಾರವಾಡ : ಮನೆ ಮುಂದೆ ಕೂತಿದ್ದ ಗ್ರಾ.ಪಂ ಸದಸ್ಯನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದ ಕೋಟೂರ ಗ್ರಾಮದಲ್ಲಿ ನಡೆದಿದೆ. ಶಂಕರಯ್ಯ ಮಠಪತಿ ಹತ್ಯೆಯಾದ ಗ್ರಾಪಂ ಸದಸ್ಯ.

ಇಬ್ಬರಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಚಾಕುವಿನಿಂದ ಒಂಬತ್ತಕ್ಕು ಹೆಚ್ಚು ಬಾರಿ ಇರಿದು ಕೊಲೆ ಮಾಡಲಾಗಿದೆ. ಶಂಕರಯ್ಯ ಮಠಪತಿ ಮನೆಯ ಮುಂದೆ ಕುಳಿತಿದ್ದಾಗ ಬೈಕ್​ನಲ್ಲಿ ಬಂದ ಹಂತಕರು ಏಕಾಏಕಿ ದಾಳಿ ಮಾಡಿದ್ದಾರೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನು ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಂಕರಯ್ಯನನ್ನು ಗ್ರಾಮದಿಂದ ಚಿಕಿತ್ಸೆಗೆ ಧಾರವಾಡಕ್ಕೆ ತರುವ ಮುನ್ನವೇ ಅವರು ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗರಗ ಠಾಣೆ ಇನ್ಸ್‌ಪೆಕ್ಟರ್ ಆಸ್ಪತ್ರೆಗೆ ದೌಡಾಯಿಸಿದ್ದು, ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು, ತನಿಖೆ ತೀವ್ರಗೊಳಿಸಿದ್ದಾರೆ. 

ಇದನ್ನೂ ಓದಿ : ಪ್ರಸಿದ್ದ ಸಿಂಹಾಚಲಂ ದೇಗುಲದಲ್ಲಿ ಬೆಳ್ಳಂಬೆಳಗ್ಗೆ ಭಾರೀ ದುರಂತ – ಸರತಿ ಸಾಲಲ್ಲಿ ನಿಂತಿದ್ದ ಭಕ್ತರ ಮೇಲೆ ಏಕಾಏಕಿ ಕುಸಿದ ಗೋಡೆ.. 8 ಮಂದಿ ಸಾವು!

Btv Kannada
Author: Btv Kannada

Read More