ಕೋಲ್ಕತ್ತಾ ನಗರದ ಬುರ್ರಾಬಜಾರ್ ಪ್ರದೇಶದಲ್ಲಿರೋ ರಿತುರಾಜ್ ಹೋಟೆಲ್ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 14 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಸುಮಾರು 8 ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಸತತ ರಕ್ಷಣೆ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಬೆಂಕಿಯಲ್ಲಿ ಸಜೀವ ದಹನಗೊಂಡ 14 ಮೃತದೇಹವನ್ನು ಹೊರತೆಗೆಯಲಾಗಿದೆ.
ಬೆಂಕಿ ಅವಘಡ ಬಗ್ಗೆ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಬ್ರಹ್ಮದೇವರಹಳ್ಳಿ ಸಹಕಾರ ಸಂಘದ ಅಧ್ಯಕ್ಷರಾಗಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್ ಅವಿರೋಧ ಆಯ್ಕೆ!

Author: Btv Kannada
Post Views: 185