ದಕ್ಷಿಣ ಕನ್ನಡ : ಮಂಗಳೂರಿನಲ್ಲಿ ರೌಡಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಶ್ವಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸುಹಾಸ್ ಫಾಜಿಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಈ ಕೊಲೆ ಪ್ರತೀಕಾರವಾಗಿ ನಡೆದಿದೆ ಎಂದು ಶಂಕಿಸಲಾಗಿದೆ.
ಗುರುವಾರ ರಾತ್ರಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಶುಕ್ರವಾರ (ಇಂದು) ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ವಿಶ್ವಹಿಂದೂ ಪರಿಷತ್ ಕರೆ ನೀಡಿದೆ.
ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6 ಮೇರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ಸುಹಾಸ್ ಹತ್ಯೆ ಖಂಡಿಸಿ ವಿಹಿಂಪ ದ.ಕ. ಜಿಲ್ಲಾ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಬಿಗು ಬಂದೋಬಸ್ತ್ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಕೆಎಸ್ ಆರ್ ಪಿ ನಿಯೋಜಿಸಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದು, ವಾಹನ ತಪಾಸಣೆ ಬಿಗುಗೊಳಿಸಲಾಗಿದೆ.
ಕಮಿಷನರ್ ಆದೇಶದಲ್ಲಿ ಏನಿದೆ? ನಿಷೇಧಾಜ್ಞೆ ಹಿನ್ನಲೆಯಲ್ಲಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚಿತ್ರಗಳ ಮೂಲಕ, ಜಾಲತಾಣಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಕೃತ್ಯ ಎಸಗುವುದು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದು ನಿಷೇಧಿಸಲಾಗಿದೆ. ಯಾವುದೇ ರೀತಿಯ ಶಸ್ತ್ರಗಳು, ದೊಣ್ಣೆಗಳು, ಮಾರಕಾಯುಧಗಳು ಸಾಗಾಟ ಮಾಡುವುದು ನಿಷೇಧಿಸಲಾಗಿದೆ. ಪಟಾಕಿಗಳನ್ನುಸಿಡಿಸುವುದು, ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ : ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು – ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ.. ಕರಾವಳಿ ಉದ್ವಿಗ್ನ!

Author: Btv Kannada
Post Views: 595