`ಮೇಲೊಬ್ಬ ಮಾಯಾವಿ’ ಚಿತ್ರದ ನಿರ್ಮಾಪಕ ಪುತ್ತೂರು ಭರತ್ ನಿಧನ!

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಭಿನಯದ `ಮೇಲೊಬ್ಬ ಮಾಯಾವಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ `ಪುತ್ತೂರು ಭರತ್’ ಎಂದೇ ಜನಪ್ರಿಯರಾಗಿದ್ದ ಭರತ್ ಕುಮಾರ್ ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು.

ಪುತ್ತೂರಿನ, ಪಡ್ನೂರು ಗ್ರಾಮದ ಮತಾವು ಮನೆಯ ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್ 43 ವರ್ಷ ಪ್ರಾಯದವರಾಗಿದ್ದು, ಬೆಂಗಳೂರಿನಲ್ಲಿ ಸಿವಿಲ್ ಬಿಲ್ಡರ್ ಆಗಿ ಸ್ವಯಂವೃತ್ತಿ ನಿರತರಾಗಿದ್ದರು.

ಭರತ್ ಅವರು ಬೆಂಗಳೂರು ಮತ್ತು ಪುತ್ತೂರು ಕಂಬಳ ಕೂಟಗಳ ಸದಸ್ಯರೂ ಆಗಿದ್ದು ಜನಾನುರಾಗಿಯಾಗಿದ್ದರು. ಮೃತ ಭರತ್ ಅವರು ಅಮ್ಮ, ಪತ್ನಿ ರವಿಕಲಾ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಾದ ಮಗ ನಿಹಾರ್ ಮತ್ತು ಮಗಳು ಹಂಸಿಕಾ, ತಮ್ಮ ಆದರ್ಶ, ತಂಗಿ ಸೌಮ್ಯಾ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದ್ದು, ಸಿನಿಮಾ ರಂಗದಲ್ಲಿ ಇನ್ನಷ್ಟು ಸಾಧಿಸುವ ಕನಸು ಹೊತ್ತಿದ್ದ ಭರತ್, ಎಳೆಯರದಲ್ಲೇ ದೂರವಾಗಿದ್ದು ತುಂಬಲಾರದ ನಷ್ಟ.

ಇದನ್ನೂ ಓದಿ : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್‌ – ದೇವನಹಳ್ಳಿಯ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ಸಿ. ಭಾವನ ಸಂಭ್ರಮ!

Btv Kannada
Author: Btv Kannada

Read More