ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 5 ತಂಡಗಳನ್ನು ರಚಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ಈ ಕೇಸ್ಗೆ ಸಂಬಂಧಿಸಿದ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಚಿಕ್ಕಮಗಳೂರಿನ ಕಳಸ ನಿವಾಸಿಗಳಾದ ಇಬ್ಬರು ಹಿಂದೂ ಯುವಕರು ಭಾಗಿಯಾಗಿದ್ದಾರೆ. ಈ ಕೇಸ್ಗೆ ಕೋಮು ಬಣ್ಣ ಹಚ್ಚಿದ ಮುಖಂಡರಿಗೆ ಇದೀಗ ಭಾರೀ ಮುಖಭಂಗವಾಗಿದೆ. ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಬಂಧಿತ 8 ಆರೋಪಿಗಳು.
ಆರೋಪಿ ರಂಜಿತ್ ಟೆಂಪೋ ಚಾಲಕನಾಗಿದ್ದು, ನಾಗರಾಜ್ ಶಾಮಿಯಾನ ಕೆಲಸ ಮಾಡ್ತಿದ್ದ. ಇನ್ನು ಅಬ್ದುಲ್ ಸಾಫ್ವಾನ್ ಮಂಗಳೂರಿನ ಶಾಂತಿಗುಡ್ಡೆ ನಿವಾಸಿಯಾಗಿದ್ದು, ಕಲಂದರ್ ಶಾಫಿ ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡ್ತಿದ್ದ.
ಸುಹಾಸ್ ಶೆಟ್ಟಿ ಕಾರಿಗೆ ಐದಾರು ಮಂದಿ ನಡುರಸ್ತೆಯಲ್ಲಿ ಗೂಡ್ಸ್ ವಾಹನದಿಂದ ಗುದ್ದಿ ತಲ್ವಾರ್ಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆ ಇಡೀ ಮಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಸಾರ್ವಜನಿಕರ ಎದುರೇ ದುಷ್ಕರ್ಮಿಗಳು ಸುಹಾಸ್ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಈ ದೃಶ್ಯ ಸ್ಥಳೀಯರ ಮೊಬೈಲ್ ಫೋನ್ನಲ್ಲೂ ಸೆರೆಯಾಗಿದೆ. ಇದೀಗ ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಹಿಂದೂ ಯುವಕರನ್ನೂ ಸೇರಿ ಎಂಟು ಜನ ಶಂಕಿತರನ್ನು ಎಂಟು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಮೊಬೈಲ್ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಸುಹಾಸ್ ಶೆಟ್ಟಿ ಕೊಲೆಗೆ ಪೊಲೀಸರು ನಿಖರ ಕಾರಣ ಪತ್ತೆ ಹಚ್ಚುತ್ತಿದ್ದಾರೆ.
ಇದನ್ನೂ ಓದಿ : ಮಗಳಿಗೆ ಮುದ್ದಾದ ಹೆಸರಿಟ್ಟ ನಟಿ ಹರ್ಷಿಕಾ ಪೂಣಚ್ಚ ದಂಪತಿ – ಹೆಸರೇನು ಗೊತ್ತಾ?
