ಬೆಂಗಳೂರು : ನಗರದ ಮಾರತ್ತಹಳ್ಳಿಯಲ್ಲಿ ಯುವತಿಯ ಜೊತೆಗೆ ಅಸಭ್ಯ ವರ್ತನೆ ತೋರಿದ್ದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದೇವರಬೀಸನಹಳ್ಳಿ ನಿವಾಸಿಯಾಗಿರೋ ಶ್ರೀಕಾಂತ್ ಬಂಧಿತ ಕಾಮುಕ.
ಕಳೆದ ಏ.30ರಂದು ರಾತ್ರಿ 11:30 ಗಂಟೆ ಸುಮಾರಿಗೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆಲಸ ಮುಗಿಸಿ ಇಕೋ ಸ್ಪೇಸ್ನ ಮುಖ್ಯದ್ವಾರದ ಬಳಿ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಕಾಮುಕ ಬೈಕ್ನಲ್ಲಿ ಹಿಂಬಾಲಿಸಿ ಯುವತಿಯ ಹಿಂಭಾಗಕ್ಕೆ ಹೊಡೆದಿದ್ದ.
ಇದೀಗ ಸಿಸಿಟಿವಿ, ಯುವಕನ ಟಿಶರ್ಟ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಡ್ಡಿ ಸಮೇತ ತೀರಿಸದೇ ಹೋದ್ರೆ ನಾನು ದೇವೇಗೌಡರ ಮಗನೇ ಅಲ್ಲ – HD ರೇವಣ್ಣ ಕಿಡಿ!
Author: Btv Kannada
Post Views: 294







