ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಮುಂದುವರಿದ್ದು, ಸದ್ಯ ಕರಾವಳಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಹತ್ಯೆಯಾದ ಸುಹಾಸ್ ಶೆಟ್ಟಿ ಮೇಲೆ 4ಕ್ಕಿಂತ ಹೆಚ್ಚು ಕ್ರಿಮಿನಲ್ ಕೇಸ್ಗಳಿದ್ದು, ರೌಡಿಶೀಟರ್ ಓಪನ್ ಮಾಡಲಾಗಿತ್ತು. ಹತ್ಯೆಯಾದ ಬಳಿಕ ಸುಹಾಸ್ ಶೆಟ್ಟಿ ಹಿಂದೂ ಕಾರ್ಯಕರ್ತ ಎಂಬ ವಿಚಾರವನ್ನೂ ಬಿಜೆಪಿ ನಾಯಕರು ಮುನ್ನಲೆಗೆ ತಂದಿದ್ದರು.
ಸುಹಾಸ್ ಹತ್ಯೆ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಮುಗಿ ಬಿದ್ದಿದ್ದರು. ಇದೀಗ ಸುಹಾಸ್ ಶೆಟ್ಟಿ ರೌಡಿಶೀಟರ್ ಓಪನ್ ಮಾಡಿದ್ದರ ಬಗ್ಗೆ ಕಾಂಗ್ರೆಸ್ ನಾಯಕರು ಇಂಚಿಂಚೂ ಮಾಹಿತಿ ರಿವೀಲ್ ಮಾಡಿದ್ದಾರೆ. 2020ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಹಾಸ್ ಶೆಟ್ಟಿ ವಿರುದ್ದ ರೌಡಿಶೀಟರ್ ಓಪನ್ ಮಾಡಿರುವ ಆದೇಶ ಪ್ರತಿಯನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ : OMC ಅಕ್ರಮ ಗಣಿಗಾರಿಕೆ ಪ್ರಕರಣ – ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ!
