ಬಾಗಲಕೋಟೆ : ಲಾರಿ-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಹೊರವಲಯದ ಸೀಮೀಕೇರಿ ಬೈಪಾಸ್ ಬಳಿ ನಡೆದಿದೆ. ಸಿದ್ದು (16), ಸಂತೋಷ (16) ಮತ್ತು ಕಾಮಣ್ಣ (16) ಮೃತ ದುರ್ದೈವಿಗಳು.
ಮೃತ ಮೂವರು ಕೂಡ ಮರನಾಳ ಗ್ರಾಮದವರೆಂದು ತಿಳಿದುಬಂದಿದೆ. ಪ್ರೌಢಶಾಲಾ ಹಂತದ ಮೂವರು ವಿದ್ಯಾರ್ಥಿಗಳು ಬೈಕ್ನಲ್ಲಿ ತೆರಳುವಾಗ ಲಾರಿ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಘಟನಾ ಸ್ಥಳಕ್ಕೆ ಬಾಗಲಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಸೆಟ್ಟೇರಿತು ಗೀತಾ ಪಿಕ್ಚರ್ಸ್ 4ನೇ ಸಿನಿಮಾ.. ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್!

Author: Btv Kannada
Post Views: 152